ಬಚ್ಚಿಟ್ಟಿದ್ದ ಮೊಬೈಲನ್ನು ಕೇಳಿದ್ದಕ್ಕೆಚಾಕು ಇರಿದು ಗೆಳೆಯನ ಕೊಂದ

KannadaprabhaNewsNetwork |  
Published : May 14, 2026, 03:15 AM IST
VV | Kannada Prabha

ಸಾರಾಂಶ

ಮದ್ಯದ ಅಮಲಿನಲ್ಲಿ ಸ್ನೇಹಿತರ ಮಧ್ಯೆ ನಡೆದ ಜಗಳ ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮದ್ಯದ ಅಮಲಿನಲ್ಲಿ ಸ್ನೇಹಿತರ ಮಧ್ಯೆ ನಡೆದ ಜಗಳ ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚೌಡೇಶ್ವರಿ ರಸ್ತೆಯ ಬೆಸ್ಕಾಂ ಕಚೇರಿ ಬಳಿಯ ನಿವಾಸಿ ಪರಶುರಾಮ್ ಯಲ್ಲಪ್ಪ (25) ಮೃತ ವ್ಯಕ್ತಿ. ಕೊಲೆ ಮಾಡಿ ಪರಾರಿ ಆಗಿರುವ ಮೃತನ ಸ್ನೇಹಿತ ರಾಮು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮಾರತ್ತಹಳ್ಳಿ ಸಮೀಪದ ಖಾಸಗಿ ಆಸ್ಪತ್ರೆಯ ಸ್ವಚ್ಛತಾ ವಿಭಾಗದಲ್ಲಿ ಧಾರವಾಡ ಜಿಲ್ಲೆಯ ಪರಶುರಾಮ್ ಹಾಗೂ ರಾಮು ಕೆಲಸ ಮಾಡುತ್ತಿದ್ದರು. ಆಸ್ಪತ್ರೆಯ ಸಮೀಪದಲ್ಲೇ ಅವರು ಬಾಡಿಗೆ ರೂಮ್‌ನಲ್ಲಿ ನೆಲೆಸಿದ್ದರು. ರೂಮ್‌ನಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಈ ಗೆಳೆಯರು ಗಲಾಟೆ ಮಾಡಿಕೊಳ್ಳುತ್ತಿದ್ದರು. ಅಂತೆಯೇ ಮೇ.10 ರಂದು ರೂಮ್‌ನಲ್ಲಿ ರಾತ್ರಿ ಅವರು ಮದ್ಯ ಸೇವಿಸಿದ್ದರು. ಆಗ ಪರಶುರಾಮ್‌ನ ಮೊಬೈಲ್ ಅನ್ನು ರಾಮು ಬಚ್ಚಿಟ್ಟಿದ್ದ. ತನ್ನ ಮೊಬೈಲ್ ಕೊಡುವಂತೆ ಆತ ಕೇಳಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೋಪಗೊಂಡ ರಾಮು, ಪರಶುರಾಮ್‌ಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಗಾಯಾಳುವನ್ನು ಆತನ ಮತ್ತೊಬ್ಬ ಸ್ನೇಹಿತ ಆಸ್ಪತ್ರೆಗೆ ದಾಖಲಿಸಿದ್ದ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಊರಿಗೆ ಹೋಗಿದ್ದ ಪರಶುರಾಮ್‌ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ತಕ್ಷಣವೇ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಗೆ ಆತನನ್ನು ಕುಟುಂಬದವರು ಚಿಕಿತ್ಸೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪರಶುರಾಮ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರಂತ ಬಡಾವಣೆ ಮಾಲೀಕರಿಗೆ 18000 ಸೈಟ್‌
ಟ್ರಾಫಿಕ್‌ ನಿಯಂತ್ರಣಕ್ಕೆ ಸಾರ್ವಜನಿಕಸಾರಿಗೆಯನ್ನು ಬಳಸಿ: ಆಯುಕ್ತ ಸಿಂಗ್‌