ಮದುವೆಯಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿ, ಯುವತಿ ಆತ್ಮಹತ್ಯೆ

KannadaprabhaNewsNetwork |  
Published : Mar 21, 2025, 12:32 AM IST
ಆತ್ಮಹತ್ಯೆ ಮಾಡಿಕೊಂಡ ಯುವತಿ.  | Kannada Prabha

ಸಾರಾಂಶ

47 ವರ್ಷದ ವ್ಯಕ್ತಿಯೋರ್ವ ಮದುವೆಯಾಗುವಂತೆ ಪದೇ ಪದೇ ಪೀಡಿಸುವುದು, ಕಿರುಕುಳ ನೀಡುವುದು, ತಮ್ಮಿಬ್ಬರ ಫೋಟೋ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತು 19 ವರ್ಷದ ಯುವತಿ ಇಲ್ಲಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಫಿನಾಯಿಲ್‌ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಗದಗ: 47 ವರ್ಷದ ವ್ಯಕ್ತಿಯೋರ್ವ ಮದುವೆಯಾಗುವಂತೆ ಪದೇ ಪದೇ ಪೀಡಿಸುವುದು, ಕಿರುಕುಳ ನೀಡುವುದು, ತಮ್ಮಿಬ್ಬರ ಫೋಟೋ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತು 19 ವರ್ಷದ ಯುವತಿ ಇಲ್ಲಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಫಿನಾಯಿಲ್‌ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮುಂಡರಗಿ ತಾಲೂಕಿನ ವಿರುಪಾಪುರ ತಾಂಡಾದ ವಂದನಾ ಪವಾರ್‌ (19) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಅದೇ ತಾಂಡಾದ ಕಿರಣ (49) ಅವಳಿಗೆ ಕಿರುಕುಳ ನೀಡಿ, ಪೀಡಿಸುತ್ತಿದ್ದ ವ್ಯಕ್ತಿ. ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ: ಆತ್ಮಹತ್ಯೆಗೀಡಾದ ಯುವತಿ ವಂದನಾ ಗದಗ ಜಿಮ್ಸ್‌ನಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದಾಳೆ. ವಂದನಾ ಕುಟುಂಬಸ್ಥರು ತಾಂಡಾದಲ್ಲಿ ಚಿಕ್ಕದೊಂದು ಬೀಡಿ ಶಾಪ್ ಹಾಕಿಕೊಂಡು ಜೀವನ ನಡೆಸುತ್ತಿದ್ಧಾರೆ. ಅದೇ ತಾಂಡಾದಲ್ಲಿ ಕಿರಣ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ವರ್ಷದ ಹಿಂದೆ ವಂದನಾ ಜೊತೆಗೆ ಮದುವೆ ಮಾಡಿಕೊಡಿ ಎಂದು ಯುವತಿಯ ಕುಟುಂಬಸ್ಥರನ್ನು ಕಿರಣ ಕೇಳಿದ್ದ ಎನ್ನಲಾಗುತ್ತಿದೆ.

ಆಗ ವಯಸ್ಸಿನ ಅಂತರ ಬಹಳ ಇದ್ದ ಕಾರಣ ಮತ್ತು ಕಿರಣ ಅಂಗವೈಕಲ್ಯ ಹೊಂದಿರುವುದರಿಂದ ಮದುವೆಗೆ ಮೃತಳ ಕುಟುಂಬಸ್ಥರು ವಿರೋಧ ಮಾಡಿದ್ದರು. ಆಗಿನಿಂದಲೂ ಈ ವ್ಯಕ್ತಿ ನಿರಂತರವಾಗಿ ಕಿರುಕುಳ ನೀಡಲು ಆರಂಭ ಮಾಡಿದ್ದು, ಈಗಲೂ ಪದೇ ಪದೇ ನಮ್ಮ ಮಗಳಿಗೆ ಕರೆ ಮಾಡಿ ಹೆದರಿಸುತ್ತಿದ್ದ ಅದಕ್ಕಾಗಿಯೇ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ಯುವತಿ ಮನೆಯವರ ಆರೋಪವಾಗಿದೆ.

ಕಿರಣ ಕಳೆದ ಹಲವು ದಿನಗಳಿಂದ ವಂದನಾಗೆ ನಿತ್ಯ ಫೋನ್ ‌ಮಾಡೋದು, ಮೆಸೇಜ್ ಮಾಡಿ, ಮದುವೆ ಆಗುವಂತೆ ಕಿರುಕುಳ ನೀಡುತ್ತಿದ್ದ, ನೀನು ಮದುವೆ ಆಗದಿದ್ದರೆ ಇಬ್ಬರ ಫೋಟೋ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಆತನ ಕಿರುಕುಳ ತಾಳಲಾರದೇ ನಮ್ಮ ಮಗಳು ಫಿನಾಯಿಲ್ ಕುಡಿದು ಸಾವನ್ನಪ್ಪಿದ್ದಾಳೆ. ಗಂಡನನ್ನು ಕಳೆದುಕೊಂಡಿದ್ದರೂ ಕಷ್ಟಪಟ್ಟು ಮೂವರು ಮಕ್ಕಳನ್ನು ಚೆನ್ನಾಗಿ ಬೆಳೆಸಿದ್ದೆ. ಮೂವರ ಪೈಕಿ ಕಿರಿಯ ಮಗಳು ವಂದನಾ ಚೆನ್ನಾಗಿ ಓದಿ ನೌಕರಿ ಮಾಡುತ್ತಿದ್ದಳು. ನಮ್ಮ ಕಷ್ಟ ನೀಗಿಸುತ್ತಿದ್ದಳು ಎಂದು ಕನಸು ಕಂಡಿದ್ದೆ, ಆದರೆ ಕಿರಣ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ನೀಲವ್ವ, ಸಹೋದರರಾದ ಶ್ರೀಕಾಂತ್, ಆನಂದ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ