ಕನ್ನಡಪ್ರಭ ವಾರ್ತೆ ಮಂಡ್ಯ
ನಂತರ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬೇಸಿಗೆ ಶಿಬಿರಗಳಿಂದ ಮಕ್ಕಳನ್ನು ಟಿವಿ, ಮೊಬೈಲ್ಗಳಿಂದ ದೂರವಿಡಬಹುದು. ಬೇಸಿಗೆ ಶಿಬಿರದಲ್ಲಿ ನೃತ್ಯ, ಸಂಗೀತ, ಯೋಗ, ಸಾಹಸ ಕ್ರೀಡೆಗಳನ್ನು ಕಲಿಸುವುದರಿಂದ ಮಕ್ಕಳು ಸದೃಢವಾಗುವುದಲ್ಲದೆ ಎಲ್ಲರೊಡನೆ ಬೆರೆಯುವಂತಹ ಅವಕಾಶಗಳನ್ನು ಕಲ್ಪಿಸಿದಂತಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವುದಕ್ಕೂ ಉತ್ತಮ ವೇದಿಕೆ ಸಿಕ್ಕಂತಾಗುತ್ತದೆ. ಪೋಷಕರು ಮಕ್ಕಳ ಆಸಕ್ತಿಯನ್ನು ಕುಂದಿಸದೆ ಮಕ್ಕಳು ಯಾವ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸುವರೋ ಆ ಕ್ಷೇತ್ರದಲ್ಲಿ ಬೆಳೆಯಲು ಪೋಷಕರು ಪ್ರೋತ್ಸಾಹ ನೀಡುವಂತೆ ಸಲಹೆ ನೀಡಿದರು.ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ನೃತ್ಯ ಹಾಗೂ ಯೋಗ ಸಾಹಸಕ್ಕೆ ಪ್ರೇಕ್ಷಕರು ಮನ ಸೋತರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಡ್ಯಜನರಲ್ಲಿ ಪುಸ್ತಕಗಳ ಓದಿನ ಲಾಭದ ಅರಿವು ಮೂಡಿಸಲು ಹಾಗೂ ಪುಸ್ತಕ ಸಂಸ್ಕೃತಿ ಹರಡಲು ಕನ್ನಡ ಪುಸ್ತಕ ಪ್ರಾಧಿಕಾರ ನಗರದ ಶಂಕರನಗರದ ಚಂದಗಾಲು ಲೇಔಟ್ನಲ್ಲಿ ಮೇ 13ರಂದು ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ ಆಯೋಜಿಸಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಮಂಡ್ಯ ಜಿಲ್ಲಾ ಜಾಗೃತ ಸಮಿತಿಯ ಸದಸ್ಯರಾದ ಡಾ.ಎಂ.ಕೆಂಪಮ್ಮ, ಮಂಜು ಮುತ್ತೇಗೆರೆ, ಡಾ. ಶುಭಶ್ರೀ ಪ್ರಸಾದ್, ಚಂದ್ರಶೇಖರ ದ.ಕೋ ಹಳ್ಳಿ, ಮಂಚಶೆಟ್ಟಿ ಎಂ., ಉಮೇಶ ದಡಮಹಳ್ಳಿ, ಅನಿಲ್ಬಾಬು, ಶಿವಕುಮಾರ್ ಆರಾಧ್ಯ, ದೇವರಾಜು ಎಸ್.ಪಂಡಿತ್, ವಾಸು, ಕುಮಾರ್, ಜಿ.ವಿ.ದೇವರಾಜು, ಅನಿಲ್ ಕುಮಾರ್, ಸದ್ದಾಂ ತಗ್ಗಹಳ್ಳಿ ಹಾಗೂ ಪುಸ್ತಕ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.