ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಮಾತನಾಡಿ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿರುವ ಮಣ್ಣಿನ ಗುಣಮಟ್ಟ, ಹವಾಮಾನಕ್ಕೆ ಹೊಂದಾಣಿಕೆಯಾಗುವಂತಹ ಬೆಳೆಗಳನ್ನು ಬೆಳೆಯುವುದಕ್ಕೆ ರೈತರು ಆಲೋಚಿಸಬೇಕು. ಬೆಣ್ಣೆ ಹಣ್ಣು, ಡ್ರ್ಯಾಗನ್ ಫ್ರೂಟ್ ಸೇರಿದಂತೆ ಹಲವು ಹಣ್ಣಿನ ಬೆಳೆ, ತರಕಾರಿ ಬೆಳೆಗಳನ್ನು ರೂಢಿಸಿಕೊಂಡು ಸಮಗ್ರ ಕೃಷಿಯಲ್ಲಿ ತೊಡಗಿದಾಗ ಹೆಚ್ಚು ಲಾಭವನ್ನು ಗಳಿಸಬಹುದು. ಆರ್ಥಿಕ ಬಲವರ್ಧನೆಯಿಂದ ರೈತರ ಬದುಕು ಹಸನಾಗಲಿದೆ ಎಂದರು.ಕೃಷಿ ಪ್ರಧಾನ ಜಿಲ್ಲೆಯಾಗಿದ್ದರೂ ಕೃಷಿಯಿಂದ ಬರುತ್ತಿರುವ ಆದಾಯ, ಉತ್ಪಾದಕತೆ ಕುಸಿದಿದೆ. ಈಗಲಾದರೂ ರೈತರು ಎಚ್ಚೆತ್ತುಕೊಳ್ಳಬೇಕು. ಜೊತೆಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆ, ನಬಾರ್ಡ್ ಅಧಿಕಾರಿಗಳು ಕೂಡ ಇಲಾಖಾ ವ್ಯಾಪ್ತಿಯ ಚೌಕಟ್ಟಿಗೆ ಒಳಪಟ್ಟು ಕಾರ್ಯನಿರ್ವಹಿಸುವ ಬದಲು ರೈತರ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರಿಗೆ ಎಲ್ಲ ರೀತಿಯ ಸಲಹೆ ಸಹಕಾರವನ್ನು ನೀಡಬೇಕು ಎಂದರು.
ಉದ್ಯೋಗವನ್ನರಸಿ ವಲಸೆ ಹೋಗುವುದನ್ನು ಬಿಟ್ಟು ಯುವಕರು ಕೃಷಿಯಲ್ಲಿ ಏನಾದರೂ ಸಾಧಿಸಲು ಮುಂದಾಗಬೇಕು. ಚಿಕ್ಕದಾಗಿ ಉದ್ದಿಮೆಯನ್ನು ಸ್ಥಾಪನೆ ಮಾಡಿ ದೊಡ್ಡ ಮಟ್ಟಕ್ಕೆ ಬೆಳೆಸಲು ಶ್ರಮವಹಿಸಬೇಕು. ಆಗ ಉದ್ಯೋಗಕ್ಕಾಗಿ ಪರಿತಪಿಸಬೇಕಾದ ಅವಶ್ಯಕತೆಯೇ ಸೃಷ್ಟಿಯಾಗುವುದಿಲ್ಲ. ನೀವು ತಯಾರಿಸುವ ಉತ್ಪನ್ನಗಳಿಗೆ ನೀವೇ ಬೆಲೆ ನಿಗದಿಪಡಿಸುವಷ್ಟು ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ತಿಳಿಸಿದರು.