ಯುಪಿಐ ಬಳಸಿ ರೈತನ ₹ 1.60 ಕೋಟಿ ವಂಚನೆ

Published : Aug 04, 2025, 08:53 AM IST
UPI

ಸಾರಾಂಶ

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.

ಮದ್ದೂರು: ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.

ತಾಲೂಕಿನ ಕೊಪ್ಪ ಹೋಬಳಿ ರಾಂಪುರ ಗ್ರಾಮದ ರೈತ ಚಂದ್ರಶೇಖರ್ ಅವರ ಸೇವಿಂಗ್ಸ್ ಖಾತೆಯಲ್ಲಿದ್ದ ₹1.60 ಕೋಟಿಯನ್ನು ಗ್ರಾಹಕರ ಗಮನಕ್ಕೆ ಬಾರದೇ ಯುಪಿಐ ಸಂಪರ್ಕ ಸಾಧಿಸಿ ವಂಚಕರು ಪಂಗನಾಮ ಹಾಕಿದ್ದಾರೆ.

ಈ ಪ್ರಕರಣ ಕುರಿತು ಚಂದ್ರಶೇಖರ್ ಮಂಡ್ಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆನ್‌ಲೈನ್ ವಂಚಕರು ಯುಪಿಐ ಕೋಡ್ ಬಳಸಿ ಜು.24ರಂದು ₹1.10ಕೋಟಿ, ನಂತರ ಜು.27ಕ್ಕೆ ₹49,99,299 ಲಕ್ಷ ಸೇರಿದಂತೆ ₹1.60 ಲಕ್ಷವನ್ನು ಹಂತ ಹಂತವಾಗಿ ಲಪಟಾಯಿಸಲಾಗಿದೆ ಎಂದು ರೈತ ಚಂದ್ರಶೇಖರ್ ಆರೋಪಿಸಿದ್ದಾರೆ. ಮಂಡ್ಯ ಸೈಬರ್ ಕ್ರೈಂ ಪೊಲೀಸರು ಬಿಎನ್‌ಎಸ್‌ ಕಾಯ್ದೆ 2023ರನ್ವಯ 318, 319 ರೀತ್ಯ ಪ್ರಕರಣ ದಾಖಲಿಸಿದ್ದಾರೆ.

PREV
Read more Articles on

Recommended Stories

ವಿದ್ಯಾರ್ಥಿಗಳಿಗೆ ಪದವಿಯಷ್ಟೆ ವೃತ್ತಿ ಕೌಶಲ್ಯತೆಯ ತರಬೇತಿ ಅಗತ್ಯ: ಡಾ.ಸಿ.ಎನ್.ಮಂಜುನಾಥ್
ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕ ಟಿ.ವೆಂಕಟೇಶ್‌ಗೆ ಅದ್ಧೂರಿ ಬೀಳ್ಕೊಡುಗೆ