ಶ್ರೀರಂಗಪಟ್ಟಣ: ಆಸ್ತಿಗಾಗಿ ಜನ್ಮ ನೀಡಿದ ತಂದೆಯನ್ನೇ ಮನೆಯಿಂದ ಹೊರಹಾಕಿರುವ ಮಗ: ದಯಾಮರಣಕ್ಕೆ ಅರ್ಜಿ

Published : Feb 18, 2025, 08:23 AM IST
judgement

ಸಾರಾಂಶ

ಆಸ್ತಿಗಾಗಿ ಜನ್ಮ ನೀಡಿದ ತಂದೆಯನ್ನೇ ಮನೆಯಿಂದ ಹೊರಹಾಕಿರುವ ಘಟನೆ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಶ್ರೀರಂಗಪಟ್ಟಣ: ಆಸ್ತಿಗಾಗಿ ಜನ್ಮ ನೀಡಿದ ತಂದೆಯನ್ನೇ ಮನೆಯಿಂದ ಹೊರಹಾಕಿರುವ ಘಟನೆ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಬೆಳಗೊಳ ಗ್ರಾಮದ 70 ವರ್ಷದ ವಯೋವೃದ್ಧ ಶಿವರಾಮು, ತನ್ನ ಮಗಳು ಲಾವಣ್ಯರೊಂದಿಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಅಳಲು ತೋಡಿಕೊಂಡರು. ಪುತ್ರ ಹಾಗೂ ಇಬ್ಬರು ಪುತ್ರಿಯರು ಸೇರಿ ಒಟ್ಟು ಮೂವರು ಮಕ್ಕಳಿದ್ದಾರೆ. 

ಕಾಲು ಗ್ಯಾಂಗ್ರೀನ್, ಮೂರ್ಛೆ ರೋಗ ಸಹ ಇದೆ. 9 ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದಾರೆ. 5 ಎಕರೆ ಜಮೀನಿದೆ. ಜೊತೆಗೆ ಬೆಳಗೊಳ ಗ್ರಾಮದಲ್ಲಿ ಮನೆ ಇದೆ. ನನ್ನ ಮಗ ಹರಿಪ್ರಸಾದ, ಸೊಸೆ ರೂಪಿಣಿ, ನಾನು ಒಂದೇ ಮನೆಯಲ್ಲಿದ್ದೇವು. ಈಗ ಮಗ-ಸೊಸೆ ಮನೆಯ ಬೀಗ ಒಡೆದು, ಮನೆಗೆ ನುಗ್ಗಿ ಚಿನ್ನ ಹಾಗೂ ಹಣ ಕದ್ದಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿದ್ದಾರೆ. ನಮಗೆ ನ್ಯಾಯ ಸಿಗದಿದ್ದಲ್ಲಿ ಜಿಲ್ಲಾಧಿಕಾರಿಗಳಿಂದ ದಯಾಮರಣ ಕೋರಿ ಅರ್ಜಿ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

PREV
Get the latest news and developments from Mandya district (ಮಂಡ್ಯ ಸುದ್ದಿ) — covering local politics, agriculture, civic issues, water conservation, tourism, community affairs and more on Kannada Prabha News.

Recommended Stories

ಕೆ.ಆರ್.ಪೇಟೆ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಭ್ರಮ
ಧ್ವಜಾರೋಹಣ, ಮಂಟಪ, ವೇದಿಕೆ, ಮಹಾದ್ವಾರಗಳ ಉದ್ಘಾಟನೆ