ಕನ್ನಡಪ್ರಭ ವಾರ್ತೆ ಮಂಡ್ಯ
ಇಲ್ಲಿನ ಆಸ್ಪತ್ರೆ ರಸ್ತೆಯಲ್ಲಿರುವ ನಿರಾಳ ಕ್ಲಿನಿಕ್ ಎದುರು ಗ್ರೂಪ್ನ ಅಧ್ಯಕ್ಷ ಡಾ.ಅನಿಲ್ ಆನಂದ್ ಧ್ವಜಾರೋಹಣ ನೆರವೇರಿಸಿದರು. ಯೂತ್ ಗ್ರೂಪ್ನ ಪದಾಧಿಕಾರಿಗಳು ಹಾಗೂ ಬಿಎಲ್ಎಸ್ ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತ್ರಿವರ್ಣಗಳಿಂದ ಕೂಡಿದ ಪೇಪರ್ ಬಾಂಬ್ಗಳನ್ನು ಸಿಡಿಸುವುದರೊಂದಿಗೆ ತಿರಂಗ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ನಿರಾಳ ಕ್ಲಿನಿಕ್ನಿಂದ ಆರಂಭವಾದ ತಿರಂಗ ಪ್ರದರ್ಶನ ಆಸ್ಪತ್ರೆ ರಸ್ತೆ ಮೂಲಕ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಾಗಿ ವಿ.ವಿ.ರಸ್ತೆ, ಹೊಸಹಳ್ಳಿ ವೃತ್ತ, ನೂರಡಿ ರಸ್ತೆ, ಬನ್ನೂರು ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ತಿರುವನ್ನು ಪಡೆದುಕೊಂಡು ಮತ್ತೆ ವಾಪಸ್ ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ಡಾ.ಬೆಸಗರಹಳ್ಳಿ ರಾಮಣ್ಣ ಸರ್ಕಲ್ ಮೂಲಕ ನಿರಾಳ ಕ್ಲಿನಿಕ್ ಬಳಿ ಅಂತ್ಯಗೊಂಡಿತು.ಡಿಜೆಯಲ್ಲಿ ಮೊಳಗುತ್ತಿದ್ದ ದೇಶಭಕ್ತಿ ಗೀತೆಗಳೊಂದಿಗೆ ಬೃಹತ್ ತಿರಂಗ ವಿವಿಧ ರಸ್ತೆಗಳಲ್ಲಿ ಸಾಗುತ್ತಿದ್ದ ವೇಳೆ ಸಾವಿರಾರು ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಂತು ತಿರಂಗ ವೀಕ್ಷಿಸಿದರು. ಗರ್ಭಿಣಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಯಾಶಿಕಾ ಅನಿಲ್ ಭಾರತ ಮಾತೆಯ ರೂಪದಲ್ಲಿ ಧ್ವಜ ಹಿಡಿದು ತಿರಂಗ ಯಾತ್ರೆಯನ್ನು ಮುನ್ನಡೆಸಿದರು. ಯೂತ್ ಗ್ರೂಪ್ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ತಲೆಗೆ ಕೇಸರಿ ಮತ್ತು ಹಸಿರು ಬಣ್ಣದ ಟೇಪುಗಳನ್ನು ಕಟ್ಟಿಕೊಂಡು ಸಾಗಿದ್ದು ವಿಶೇಷವಾಗಿತ್ತು.
ಸ್ವಾತಂತ್ರ್ಯದ ದಿನದಂದು ರಕ್ತಸಂಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇಲ್ಲಿ ಸಂಗ್ರಹವಾಗುವ ರಕ್ತ ಎಷ್ಟು ಜೀವಕ್ಕೆ ಸಂಜೀವಿನಿಯಾಗಲಿದೆಯೋ ಗೊತ್ತಿಲ್ಲ. ಸಕಾಲಕ್ಕೆ ದೊರಕುವ ರಕ್ತದಿಂದ ಅಮೂಲ್ಯ ಜೀವಗಳು ಉಳಿದರೆ ರಕ್ತದಾನ ಸಾರ್ಥಕತೆ ಪಡೆಯುತ್ತದೆ ಎಂದು ಹೇಳಿದರು.