ಮಂಗಳೂರು: ಮಂಗಳಾ ಸಮೂಹ ಶಿಕ್ಷಣ ಸಂಸ್ಥೆ ಅಧೀನದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಶಿವಶರಣ ಶೆಟ್ಟಿ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ಹೆಚ್ಚಿನ ಪ್ರಮಾಣದಲ್ಲಿದೆ. ಅದಕ್ಕೆ ತಕ್ಕಂತೆ ನಾವು ಅಪ್ಡೇಟ್ ಆಗಲೇಬೇಕು. ಇಲ್ಲದೇ ಹೋದರೆ ಔಟ್ಡೇಟ್ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ. ಇದಕ್ಕಾಗಿ ನಿರಂತರ ಓದುವ ಕಲೆಯನ್ನು ಸಿದ್ಧಿಸಿಕೊಳ್ಳಿ ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಗಣಪತಿ ಪಿ. ಮಾತನಾಡಿ, ಸಾಮಾಜಿಕ ಮಾಧ್ಯಮಗಳ ಜತೆ ಹೆಚ್ಚು ಸಮಯ ವ್ಯಯ ಮಾಡಬೇಡಿ. ವೃತ್ತಿಗೆ ಸೇರಿಕೊಂಡಾಗ ತಮ್ಮ ವೇತನದಲ್ಲಿ ಉಳಿಸುವ ಕೆಲಸ ಮಾಡಿಕೊಂಡು ದೇಶಕ್ಕೆ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಿ ಎಂದರು.ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ವರದಿ ಮಂಡಿಸಲಾಯಿತು. ಸಾಧಕ ಹಾಗೂ ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಗಣ್ಯರು ಗೌರವಿಸಿದರು. ಸಹಾಯಕ ಪ್ರಾಧ್ಯಾಪಕರಾದ ಶರಣ್ಯ ಅಮೀನ್ ರ್ಯಾಂಕ್ ವಿಜೇತರ ಪಟ್ಟಿ ವಾಚಿಸಿದರು.ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಅನಿತಾ ಜಿ. ಭಟ್, ಮಂಗಳಾ ಕಾಲೇಜ್ ಆಫ್ ನರ್ಸಿಂಗ್ ಆ್ಯಂಡ್ ಸ್ಕೂಲ್ ಆಫ್ ನರ್ಸಿಂಗ್ ಪ್ರಿನ್ಸಿಪಾಲ್ ಪ್ರೊ. ಸುಬ್ರಹ್ಮಣ್ಯ ನಾಯಕ್, ಮಂಗಳಾ ಕಾಲೇಜ್ ಆಫ್ ಫ್ಯಾರಾ ಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈನ್ಸಸ್ನ ಪ್ರಿನ್ಸಿಪಾಲ್ ಪ್ರೊ. ಪ್ರತಿಜ್ಞಾ ಸುವಾಸಿನಿ ಜಿ. ಆರ್., ಮಂಗಳಾ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈನ್ಸಸ್ನ ವೈಸ್ ಪ್ರಿನ್ಸಿಪಾಲ್ ಪ್ರೊ. ಗೀತಾಲಕ್ಷ್ಮಿ, ಮಂಗಳಾ ಕಾಲೇಜ್ ಆಫ್ ಪಿಸಿಯೋಥೆರಪಿಯ ಪ್ರೊ.ಡಾ.ಭರತ್ ಕೆ.ಎಚ್. ಇದ್ದರು.
ಫೋಟೊ