ಕುಣಿಗಲ್: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಪರಾರಿ ಆಗುವಾಗ ಪ್ರೇಮಿಯನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸ್ ಠಾಣೆಗೆ ನೀಡಿದ ಘಟನೆ ಪಟ್ಟಣದ ದೊಡ್ಡಪೇಟೆ ಬಳಿ ನಡೆದಿದೆ.
ಪ್ರೇಮದ ಹಿನ್ನೆಲೆ:
ಕಳೆದ ಆರು ತಿಂಗಳ ಹಿಂದೆ ಫೇಸ್ಬುಕ್ನಲ್ಲಿ ಮಂಗಳಮುಖಿ ಹನೀಶಾ ಮಂಡ್ಯದ ಆದೀಲ್ಗೆ ಪರಿಚಯವಾಗಿ ನಂತರ ಪ್ರೇಮಕ್ಕೆ ತಿರುಗಿತ್ತು. ಪ್ರೇಮಿ ಆದೀಲ್ ಕುಣಿಗಲ್ ಹನಿಶಾ ಮನೆಗೆ ಬಂದು ಅನಾಥ ಎಂದು ಸುಳ್ಳಿ ಹೇಳಿ ಕಳೆದ ನಾಲ್ಕು ಐದು ತಿಂಗಳಿನಿಂದ ವಾಸವಾಗಿದ್ದನು. ಮನೆಯ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಎನ್ನಲಾಗಿದೆ. ಇಬ್ಬರ ಪ್ರೀತಿಯಲ್ಲಿ ವ್ಯತ್ಯಾಸ ಉಂಟಾಗಿ ಕೆಲ ವಿಚಾರವಾಗಿ ಹನೀಶಾ ಹಾಗೂ ಆದೀಲ್ ನಡುವೆ ಜಗಳ ನಡೆಯುತ್ತಿತ್ತು.ಹನೀಶಾ ಮೇಲೆ ಆದೀಲ್ ಹಲ್ಲೆ ನಡೆಸಿ ಮಂಡ್ಯಗೆ ಹೋಗಿ ನೆಲೆಸಿದ್ದನು. ಪ್ರೇಮದ ವಿಚಾರವಾಗಿ
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಾಳು, ಮಂಗಳಮುಖಿ ಹನಿಷಾಗೆ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಕು ಇರಿದ ಆರೋಪಿಯನ್ನು ಕುಣಿಗಲ್ ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಾಗಿದೆ.