ಕನ್ನಡಪ್ರಭ ವಾರ್ತೆ ಮಂಗಳೂರು
ಸುಮಾರು ಒಂದೂವರೆ ಲಕ್ಷದಷ್ಟು ಸ್ವಸಹಾಯ ಗುಂಪುಗಳ ಮಹಿಳೆಯರು ಸಮವಸ್ತ್ರದಲ್ಲಿ ಭಾಗವಹಿಸಲಿರುವ ಈ ದಾಖಲೆಯ ಚಾರಿತ್ರಿಕ ಸಮಾವೇಶದ ಸಿದ್ಧತೆಯನ್ನು ಪರಿಶೀಲಿಸಿದ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ನ ಸಂಸ್ಥಾಪಕ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ರಾಜ್ಯಕ್ಕೆ ಗೌರವ ತರುವ ಸಮಾವೇಶ:ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ರಜತ ಸಂಭ್ರಮ ಸಮಾವೇಶಕ್ಕೆ ಯಾವುದೇ ರೀತಿಯ ಕೊರತೆಯಾಗದಂತೆ ಅತ್ಯಂತ ವ್ಯವಸ್ಥಿತವಾಗಿ, ದೇಶಕ್ಕೆ ಮಾದರಿಯಾಗುವಂತೆ ಅಭೂತಪೂರ್ವ ರೀತಿಯಲ್ಲಿ ನಡೆಸಲು ಎಲ್ಲ ತಯಾರಿಗಳನ್ನು ಮಾಡಿದ್ದೇವೆ. ದ.ಕ. ಜಿಲ್ಲೆ ಮಾತ್ರವಲ್ಲ, ನವೋದಯ ಸ್ವಸಹಾಯ ಸಂಘಗಳು, ರಾಜ್ಯಕ್ಕೆ ಗೌರವ ತರುವ ರೀತಿಯಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಿದರು.
ಸಮಯಕ್ಕೆ ಮಹತ್ವ:
160 ಊಟದ ಕೌಂಟರ್:
ವಿವಿಧೆಡೆಗಳಿಂದ ಆಗಮಿಸುವ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಪಡುಬಿದ್ರಿ, ವಾಮಂಜೂರು, ಬಂಟ್ವಾಳ, ಫರಂಗಿಪೇಟೆಯಲ್ಲಿ ಉಪಹಾರದ ಪೊಟ್ಟಣಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ. ಸಮಾವೇಶ ಸ್ಥಳದಲ್ಲಿ ಪ್ರತಿಯೊಬ್ಬರಿಗೂ ನೀರು, ಬಿಸ್ಕತ್ತು, ಚಾಕಲೇಟ್ ವಿತರಿಸಲು ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ. ವಾಹನ ಪಾರ್ಕಿಂಗ್ಗೆ ಸರ್ವಸಜ್ಜಿತ ವ್ಯವಸ್ಥೆ ಮಾಡಸಲಾಗಿದ್ದು, ಎಲ್ಲ ಕೆಲಸಗಳನ್ನು ಸ್ವಯಂ ಸೇವಕರು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದಾರೆ ಎಂದರು.
5 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಆರ್ಥಿಕ ಭದ್ರತೆ:
ಪಕ್ಷಾತೀತ, ಜಾತ್ಯತೀತ:
ವಸ್ತು ಪ್ರದರ್ಶನ ಮಳಿಗೆಗಳು:
ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ವಸ್ತು ಪ್ರದರ್ಶನ ಮಳಿಗೆಗಳನ್ನೂ ತೆರೆಯಲಾಗುವುದು. ಸ್ವಸಹಾಯ ಗುಂಪುಗಳ ಮಹಿಳೆಯರ ಉತ್ಪಾದನೆಯ ಅನೇಕ ಸ್ಟಾಲ್ಗಳು ಇರಲಿವೆ ಎಂದು ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು.ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್, ಶಶಿಕುಮಾರ್ ರೈ ಬಿ., ಮೋನಪ್ಪ ಶೆಟ್ಟಿ ಎಕ್ಕಾರು, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಉದ್ಯಮಿಗಳಾದ ಪುಷ್ಪರಾಜ್ ಜೈನ್, ಜಯಪ್ರಕಾಶ್ ತುಂಬೆ, ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತಿತರರು ಇದ್ದರು.
--------------ಅಬಲೆಯರ ಬದುಕು ಕಟ್ಟಿದ ನವೋದಯ ಗುಂಪುಗಳು..25 ವರ್ಷಗಳ ಹಿಂದೆ ನವೋದಯ ಸ್ವಸಹಾಯ ಗುಂಪಿನ ಸದಸ್ಯರಾಗಿ ಸೇರ್ಪಡೆಯಾದ ಕಾಪುವಿನ ನಂದಿನಿ ಸ್ವಸಹಾಯ ಗುಂಪಿನ ಸದಸ್ಯೆ ಪ್ರಭಾವತಿ ಸ್ಥಳಕ್ಕಾಗಮಿಸಿದ್ದರು. ಅವರನ್ನು ವೇದಿಕೆಗೆ ಕರೆಸಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಪ್ರಭಾವತಿ ಅವರ ಸಬಲೀಕರಣದ ಹಾದಿಯನ್ನು ವಿವರಿಸಿದರು. ಪ್ರಭಾವತಿ ಅನಕ್ಷರಸ್ಥೆ. 25 ವರ್ಷಗಳ ಹಿಂದೆ ಅವರ ಪತಿ ಕ್ಯಾನ್ಸರ್ನಿಂದ ತೀರಿಕೊಂಡಿದ್ದರು. ಇಂಥ ಪರಿಸ್ಥಿತಿಯಲ್ಲಿ ನವೋದಯ ಸ್ವಸಹಾಯ ಗುಂಪಿಗೆ ಸೇರ್ಪಡೆಯಾಗಿ ಆರ್ಥಿಕ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವತಂತ್ರ ಜೀವನ ನಡೆಸುತ್ತಿದ್ದಾರೆ ಎಂದರು.
ಇದೇ ರೀತಿ ಸ್ವಸಹಾಯ ಗುಂಪಿನ ಮಹಿಳೆಯರ ಮಕ್ಕಳು ವೈದ್ಯರು, ಎಂಜಿನಿಯರ್ಗಳು, ವಿವಿಧ ಉನ್ನತ ಹುದ್ದೆಗಳಿಗೆ ತೆರಳಿದ್ದಾರೆ. ಮಹಿಳಾ ಸಬಲೀಕರಣ ಎಂದರೆ ಇದೇ. ನವೋದಯ ಸ್ವಸಹಾಯ ಗುಂಪುಗಳ ಯಶಸ್ಸು ಇಂಥ ಸಾರ್ಥಕತೆಯಲ್ಲೇ ಅಡಗಿದೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.