ಮಂಗಳೂರು: ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಠಿಣ ಶ್ರಮ, ಆತ್ಮವಿಶ್ವಾಸ ಮತ್ತು ಗುರಿಯೊಂದಿಗೆ ಸಾಗಿದರೆ ನಾವು ಉನ್ನತಮಟ್ಟಕ್ಕೆ ಏರಲು ಸಾಧ್ಯ. ಬದುಕಿನಲ್ಲಿ ಯಾವುದೇ ಸವಾಲುಗಳು ಬಂದರು ಧೈರ್ಯದಿಂದ ಎದುರಿಸಿ ಸದಾ ಹೊಸದನ್ನು ಕಲಿಯುವ ಮನೋಭಾವವನ್ನು ಹೊಂದಿರಬೇಕು. ಶಿಕ್ಷಣ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ವ್ಯಕ್ತಿತ್ವ ನಿರ್ಮಾಣಕ್ಕೂ ಸಹಾಯಕವಾಗಬೇಕು ಎಂದು ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಹೇಳಿದರು.
೨೦೨೪-೨೬ರ ಶೈಕ್ಷಣಿಕ ಸಾಲಿನಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿನಿಯಾಗಿರುವ ಅಮೂಲ್ಯ ಕಾಮತ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ತಾವು ಕಾಲೇಜಿನಲ್ಲಿ ಕಳೆದ ಎರಡು ವರ್ಷದ ಸವಿ ನೆನಪುಗಳನ್ನು ಮೆಲುಕು ಹಾಕಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ತಂತ್ರಜ್ಞಾನದ ನಿರ್ದೇಶಕ ಅಂಕುಶ್ ಎನ್. ನಾಯಕ್, ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಕೋರ್ ಕಮಿಟಿ ಸದಸ್ಯ ಬಿ. ವಿನಯ್ ಕುಮಾರ್, ಕೋಚಿಂಗ್ ಸಂಯೋಜಕ ಕರುಣಾಕರ್ ಬಳ್ಕೂರು, ಭೌತಶಾಸ್ತ್ರದ ಉಪನ್ಯಾಸಕಿ ಶ್ರೀವಿದ್ಯಾ, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಅಶ್ವಿನಿ ಪೈ, ಪ್ರಶಾಂತ್ ಪೈ ಇದ್ದರು.ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕ ಪೃಥ್ವಿ ಡಿಸೋಜಾ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ನಿಹಾರಿಕಾ ವಂದಿಸಿದರು. ಕಾರ್ಯಕ್ರಮದ ಸಂಯೋಜಕಿ ಶ್ವೇತಾ ಸುವರ್ಣ ಸಹಕರಿಸಿದರು.