ಇಂದು ಮಂಗಳೂರು- ಗೋವಾ ‘ವಂದೇ ಭಾರತ್‌’ ಪ್ರಾಯೋಗಿಕ ಸಂಚಾರ

KannadaprabhaNewsNetwork |  
Published : Dec 26, 2023, 01:30 AM IST
ಮಂಗಳೂರಿಗೆ ಆಗಮಿಸಿರುವ ನೂತನ ವಂದೇ ಭಾರತ್ ರೈಲು | Kannada Prabha

ಸಾರಾಂಶ

ಮಂಗಳೂರಿಗೆ ಬಹು ನಿರೀಕ್ಷಿತ ವಂದೇ ಭಾರತ್‌ ರೈಲು ಆಗಮಿಸಿದ್ದು, ಮಂಗಳೂರು-ಗೋವಾ ನಡುವೆ ಸಂಚರಿಸಲಿದೆ. ಇದರ ಪ್ರಾಯೋಗಿಕ ಸಂಚಾರ ಮಂಗಳವಾರದಿಂದ ಆರಂಭವಾಗಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಬಹುನಿರೀಕ್ಷಿತ ಮಂಗಳೂರು- ಗೋವಾ ಸೇರಿದಂತೆ ದೇಶದ 6 ಕಡೆಗಳಲ್ಲಿ ಆರಂಭವಾಗುವ ವಂದೇ ಭಾರತ್‌ ರೈಲಿಗೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಚಾಲನೆ ನೀಡುವ ನಿರೀಕ್ಷೆಯಿದ್ದು, ಈ ರೈಲಿನ ಪ್ರಾಯೋಗಿಕ ಸಂಚಾರ ಡಿ.26ರಂದು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಆರಂಭವಾಗಲಿದೆ.

ಪ್ರಾಯೋಗಿಕ ಸಂಚಾರ ಹಿನ್ನೆಲೆಯಲ್ಲಿ ವಂದೇ ಭಾರತ್‌ ರೈಲು ಸೋಮವಾರವೇ ಮಂಗಳೂರು ಸೆಂಟ್ರಲ್‌ಗೆ ಬಂದು ತಲುಪಿದೆ. ಸೋಮವಾರ ಸಕಲ ಸಿದ್ಧತೆಯೊಂದಿಗೆ ಪ್ರಾಯೋಗಿಕ ಸಂಚಾರ ನಡೆಸಲಿದೆ.

ಮಂಗಳೂರು-ಗೋವಾ, ಮಂಗಳೂರು- ತಿರುವನಂತಪುರಂ ಹಾಗೂ ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸಂಚಾರಕ್ಕೆ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಸೆ.22ರಂದು ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಈ ಪೈಕಿ ಪ್ರಥಮ ಹಂತದಲ್ಲಿ ಮಂಗಳೂರು-ಗೋವಾ ನಡುವೆ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಿಕ್ಕಿದೆ.

ಮಂಗಳೂರು- ಗೋವಾ ನಡುವಿನ ವಂದೇ ಭಾರತ್‌ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಪ್ರಕಾರ ಮಂಗಳವಾರ ಹೊರತುಪಡಿಸಿ ವಾರದ 6 ದಿನವೂ ಸಂಚಾರ ನಡೆಸಲಿದೆ. ಕೇವಲ 4.35 ಗಂಟೆಯಲ್ಲಿ 315 ಕಿ.ಮೀ. ದೂರವನ್ನು ಗಂಟೆಗೆ 68.7 ಕಿ.ಮೀ. ವೇಗದಲ್ಲಿ ಕ್ರಮಿಸಲಿದೆ. ಉಡುಪಿ ಮತ್ತು ಕಾರವಾರಗಳಲ್ಲಿ ಮಾತ್ರ ನಿಲುಗಡೆ ಕಲ್ಪಿಸಲಾಗಿದೆ. ಈ ರೈಲಿನ ನಿರ್ವಹಣೆ ಮಂಗಳೂರು ಸೆಂಟ್ರಲ್‌ ನಿಲ್ದಾಣದಲ್ಲಿ ನಡೆಯಲಿದೆ.

ಹೊಸ ಫ್ಲ್ಯಾಟ್‌ ಫಾರಂ ಲೋಕಾರ್ಪಣೆ: ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಂದರ್ಭದಲ್ಲಿ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ 4 ಮತ್ತು 5ನೇ ಪ್ಲಾಟ್‌ಫಾರಂ ಕೂಡ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ