ಶಿಕ್ಷಣದಲ್ಲಿ ಕಲೆ ಕಲಿಕೆಯ ಅನುಭವವನ್ನು ಶ್ರೀಮಂತಗೊಳಿಸುತ್ತದೆ: ಪುರಾಣಿಕ್

KannadaprabhaNewsNetwork |  
Published : May 01, 2026, 02:30 AM IST
ಡಾ.ಎಂ.ಬಿ.ಪುರಾಣಿಕ್ ಕಾರ್ಯಗಾರ ಉದ್ಘಾಟಿಸಿದರು | Kannada Prabha

ಸಾರಾಂಶ

ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಂಡಿರುವ ಭರತನಾಟ್ಯದ ವಿದ್ವತ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿದ ಒಂದು ದಿನದ ‘ಭಾವಗಳ ಭಾಷೆ ರಸೋತ್ಪತಿ ಮತ್ತು ನಾಯಿಕ ನಾಯಕ’ ಎಂಬ ವಿಷಯದಲ್ಲಿ ವಿಶೇಷ ನೃತ್ಯ ಕಾರ್ಯಗಾರ

ಮಂಗಳೂರು: ಶಿಕ್ಷಣದಲ್ಲಿ ಕಲೆಗಳು ಕೇವಲ ಒಂದು ವಿಷಯವಲ್ಲ. ಬದಲಿಗೆ ಕಲಿಕೆಯ ಅನುಭವಗಳನ್ನು ಶ್ರೀಮಂತಗೊಳಿಸುವ ಸಾಧನವಾಗಿದೆ ಎಂದು ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಹೇಳಿದರು.

ಅವರು ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಂಡಿರುವ ಭರತನಾಟ್ಯದ ವಿದ್ವತ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿದ ಒಂದು ದಿನದ ‘ಭಾವಗಳ ಭಾಷೆ ರಸೋತ್ಪತಿ ಮತ್ತು ನಾಯಿಕ ನಾಯಕ’ ಎಂಬ ವಿಷಯದಲ್ಲಿ ವಿಶೇಷ ನೃತ್ಯ ಕಾರ್ಯಗಾರ ಉದ್ಘಾಟಿಸಿ ಮಾತಾಡಿದರು.

ನೃತ್ಯ ಕಲಾವಿದ ಮಕ್ಕಳಿಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್‌ನ ಕಾರ್ಯ ಅಭಿನಂದನೀಯ ಎಂದರು.

ಪರಿಷತ್ ಅಧ್ಯಕ್ಷೆ ವಿದುಷಿ ರಾಜಶ್ರೀ ಉಳ್ಳಾಲ್ ಪ್ರಸ್ತುತ ಪರಿಷತ್ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಉಪಾಧ್ಯಕ್ಷ ವಿದ್ವಾನ್ ಚಂದ್ರಶೇಖರ ನಾವಡ, ಕಾರ್ಯದರ್ಶಿ ವಿದುಷಿ ಶಾರದಾಮಣಿ ಶೇಖರ್, ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಯು.ಕೆ.ಪ್ರವೀಣ್, ಕೋಶಾಧಿಕಾರಿ ವಿದ್ವಾನ್ ಸುರೇಶ್ ಅತ್ತಾವರ್ ಮತ್ತಿತರರು ಇದ್ದರು.

ಗುರು ಶ್ರೀಧರ ಹೊಳ್ಳ ಸ್ವಾಗತಿಸಿ, ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿರಸಿಯ ಪ್ರಸಿದ್ಧ ನೃತ್ಯ ಕಲಾವಿದೆ ಡಾ.ಸಹನಾ ಭಟ್ ಕಾರ್ಯಾಗಾರ ನಡೆಸಿಕೊಟ್ಟರು. ಮಂಗಳೂರಿನ ಸುಮಾರು 130 ಕ್ಕೂ ನೃತ್ಯ ಕಲಾವಿದರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ವೈದ್ಯ
ರಣಬಿಸಿಲಿಗೆ ಗಣತಿದಾರರು ತೀವ್ರ ಹೈರಾಣು