ಮಂಗಳೂರು ಎಂಸಿಸಿ ಬ್ಯಾಂಕ್‌ ವಾರ್ಷಿಕ ಪ್ರಗತಿ ಪರಿಶೀಲನೆ

KannadaprabhaNewsNetwork |  
Published : Jun 17, 2025, 12:24 AM ISTUpdated : Jun 17, 2025, 12:25 AM IST
ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ನಡೆಯಿತು. | Kannada Prabha

ಸಾರಾಂಶ

ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಂಸಿಸಿ) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಂಸಿಸಿ) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು.

ರೊಸಾರಿಯೊ ಕೆಥೆಡ್ರಲ್‌ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರು ವಂ.ವಲೇರಿಯ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿ ಬ್ಯಾಂಕಿನ ಇತ್ತೀಚೆಗಿನ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಮಾತನಾಡಿ, ಬ್ಯಾಂಕನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಿಬ್ಬಂದಿಯ ಅಚಲ ಪ್ರಯತ್ನ ಅಭಿನಂದನೀಯ ಎಂದರು. ಪ್ರಶಸ್ತಿಯನ್ನು ಗಳಿಸಿದ ಶಾಖೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿ ಬ್ಯಾಂಕಿನ ಅಭಿವೃದ್ಧಿಗೆ ಮಾತ್ರವಲ್ಲದೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.ಕೆನರಾ ಬ್ಯಾಂಕಿನ ಮಾಜಿ ಜನರಲ್ ಮ್ಯಾನೆಜರ್ ಬಾಲಚಂದ್ರ ರಾವ್ ಅವರು ಮಾನವ ಸಂಪನ್ಮೂಲ ಮತ್ತು ವೃತ್ತಿಪರತೆಯ ಕುರಿತು ಮಾತನಾಡಿದರು. ಬ್ಯಾಂಕಿನ ಸಲಹೆಗಾರ ಎಸ್.ಎಚ್. ವಿಶ್ವೇಶ್ವರಯ್ಯ ಅವರು ಬ್ಯಾಂಕಿನ 2024-25ನೇ ಸಾಲಿನ ಕಾರ್ಯಕ್ಷಮತೆಯ ವಿಮರ್ಶೆ ನಡೆಸಿಕೊಟ್ಟರು. ಸಿಬ್ಬಂದಿ ಕಾರ್ಯಕ್ಷಮತೆ ವಿಮರ್ಶೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ವಹಿಸಿದ್ದರು. ಎನ್‌ಐಟಿಕೆ ಸುರತ್ಕಲ್‌ನ ಮಾಜಿ ಪ್ರಾಧ್ಯಾಪಕ ಮತ್ತು ಡೀನ್ ಡಾ. ಅಲೋಶಿಯಸ್ ಸಿಕ್ವೇರಾ, ಪದುವಾ ಕಾಲೇಜು ಪ್ರಾಂಶುಪಾಲ ಅರುಣ್ ಲೋಬೊ ಮುಖ್ಯ ಅತಿಥಿಗಳಾಗಿದ್ದರು, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಮತ್ತು ಆಡಳಿತ ಮಂಡಳಿ ನಿರ್ದೇಶಕರು ವೇದಿಕೆಯಲ್ಲಿದ್ದರು. ವೈಯಕ್ತಿಕ ಕಾರ್ಯಕ್ಷಮತೆ, ಸಾಮಾಜಿಕ ಮಾಧ್ಯಮ ಪ್ರಚಾರ, ಫೈವ್ ಸ್ಟಾರ್ ರೇಟಿಂಗ್ ಪಡೆದ ಶಾಖೆ (ಗೂಗಲ್), ಸಾಮಾಜಿಕ ಮಾಧ್ಯಮ ಗುರಿ ಸಾಧನೆ, ಮೈಲಿಗಲ್ಲು ಸಾಧನೆ ಪ್ರಶಸ್ತಿ (ಒಂದು ವರ್ಷ ಪೂರ್ಣಗೊಳಿಸಿದ ಶಾಖೆಗೆ), 2024-25ನೇ ವಿತ್ತೀಯ ವರ್ಷದಲ್ಲಿ ಅತ್ಯುತ್ತಮ ಸಾಧನೆಗೈದ ಶಾಖೆ ಮತ್ತು ಅತ್ಯಧಿಕ ವಹಿವಾಟು ಸಾಧಿಸಿದ ಶಾಖೆಗಳಿಗೆ ಪ್ರಶಸ್ತಿ ನೀಡಲಾಯಿತು. ನಿರ್ದೇಶಕರಾದ ಜೋಸೆಫ್ ಅನಿಲ್ ಪತ್ರಾವೊ, ಎಲ್ರಾಯ್ ಕ್ರಾಸ್ಟೊ, ಆಂಡ್ರ್ಯೂ ಡಿಸೋಜ, ಡೇವಿಡ್ ಡಿಸೋಜ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ಡಾ ಫ್ರೀಡಾ ಎಫ್. ಡಿಸೋಜ, ಐರಿನ್ ರೆಬೆಲ್ಲೊ, ಡಾ. ಜೆರಾಲ್ಡ್ ಪಿಂಟೊ, ವಿನ್ಸೆಂಟ್ ಲಸ್ರಾದೊ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನಾ, ಆಡಳಿತ ಮಂಡಳಿ ಸದಸ್ಯರಾದ ಶರ್ಮಿಳಾ ಮಿನೆಜಸ್, ಫೆಲಿಕ್ಸ್ ಡಿಕ್ರೂಜ್ ಮತ್ತು ಆಲ್ವಿನ್ ಮೊಂತೇರೊ ಇದ್ದರು. ಉಪ ಪ್ರಧಾನ ವ್ಯವಸ್ಥಾಪಕ ರಾಜ್ ಎಫ್. ಮಿನೇಜಸ್ ವಂದಿಸಿದರು. ಹಿರಿಯ ವ್ಯವಸ್ಥಾಪಕ ಡೆರಿಲ್ ಲಸ್ರಾದೊ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ