ಮಂಗಳೂರು: ಕಾಸರಗೋಡಿನ ಬದಿಯಡ್ಕ ಬಳಿಯ ವೀಣಾವಾದಿನಿ ಸಂಗೀತ ವೈದಿಕ ತಾಂತ್ರಿಕ ವಿದ್ಯಾಪೀಠದ 4 ದಿನಗಳ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಈ ಪರಿಸರದಲ್ಲಿ ಕನ್ನಡ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಪ್ರಯತ್ನ ನಡೆಯಬೇಕಾಗಿದೆ. ಜತೆಗೆ ಭಾರತೀಯ ಪರಂಪರೆಯ ಧಾರ್ಮಿಕ, ಸಾಂಸ್ಕೃತಿಕ ತಿಳುವಳಿಕೆಯನ್ನು ಯುವ ಜನತೆಗೆ ನೀಡಬೇಕಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕೇರಳದ ಅಲ್ವಾಯಿಯ ತಾಂತ್ರಿಕ ವಿದ್ಯಾಪೀಠದ ಪ್ರಾಂಶುಪಾಲ ಪುತ್ತೂರಿನ ಪೈರಪುಣಿ ಬಾಲಕೃಷ್ಣ ಭಟ್, ಬ್ರಹ್ಮಶ್ರೀ ಮುಲ್ಲಪಲ್ಲಿ ಕೃಷ್ಣನ್ ನಂಬೂದಿರಿ, ಬದಿಯಡ್ಕದ ವೈದ್ಯ ಡಾ. ಶ್ರೀನಿಧಿ ಸರಳಾಯ ಹಾಗೂ ಬೇಳದ ಕೌಮುದಿ ನೇತ್ರಾಲಯದ ನೇತ್ರ ತಜ್ಞ ಡಾ.ಸುನಿಲ್ ಇದ್ದರು.ಕಾರ್ಯಕ್ರಮವನ್ನು ರಾಜಾರಾಮ್ ಪೆರ್ಲ ನಿರ್ವಹಿಸಿದರು. ಸಂಚಾಲಕ ಯೋಗೀಶ ಶರ್ಮ ಅವರು ವಿದ್ಯಾಲಯದ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾಡಿದರು. ಶ್ರೀಹರಿ ನೀಲಂಗಳ ವಂದಿಸಿದರು. ಬಳಿಕ ಸಂಗೀತ ಗುರುಗಳು ಹಾಗೂ ವಿದ್ಯಾರ್ಥಿಗಳ ಸಾಮೂಹಿಕ ನವಾವರಣ ಸಂಗೀತದ ಜತೆಗೆ ಮುಲ್ಲಪಲ್ಲಿ ಕೃಷ್ಣನ್ ನಂಬೂದಿರಿ ನೇತೃತ್ವದಲ್ಲಿ ಅಪರೂಪದ ಶ್ರೀಚಕ್ರ ಪೂಜೆ ಜರುಗಿತು.