ಕನ್ನಡಪ್ರಭ ವಾರ್ತೆ ಮಂಗಳೂರು
ಬಳಿಕ ಮಾತನಾಡಿದ ಅವರು, ನಾಡಿನ ಇತಿಹಾಸವನ್ನು ಪೀಳಿಗೆಯಿಂದ ಪೀಳಿಗೆಗೆ ಸಾಗಿಸುವ ಕೆಲಸವಾಗಬೇಕು. ಇಲ್ಲವಾದರೆ ಇತಿಹಾಸವನ್ನು ಮರೆತುಬಿಡುವ ಅಪಾಯ ಎದುರಾಗುತ್ತದೆ. ಈ ನಿಟ್ಟಿನಲ್ಲಿ ಕಲೆಯ ಮೂಲಕ ಮಾನವೀಯತೆಯ ಸಂಬಂಧ ಬೆಸೆಯುವ ಕಾರ್ಯ ಮುಂದುವರಿಯಬೇಕು. ಕರಾವಳಿಯ ಭಿನ್ನತೆಯಲ್ಲಿನ ಏಕತೆಯ ಪರಂಪರೆಯನ್ನು ಮುಂದುವರಿಸಲು ಈ ವೇದಿಕೆ ಕಾರಣವಾಗಲಿ ಎಂದು ಆಶಿಸಿದರು. ನಟ ಪ್ರಕಾಶ್ ರಾಜ್ ಮಾತನಾಡಿ, ಮನುಷ್ಯನ ವಿಕಾಸದಲ್ಲಿ ಸೌಹಾರ್ದತೆ ಅತಿ ಮುಖ್ಯವಾಗಿದ್ದು, ಅದನ್ನು ವಿಚ್ಛೇದಿಸುವ ಕಾರ್ಯ ಆಗಬಾರದು. ಕರಾವಳಿಯ ಸೌಹಾರ್ದತೆಯನ್ನು ಮರುಚಿಂತನೆಗೆ ಹಚ್ಚುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ನಿರ್ದಿಗಂತ ಉತ್ಸವವನ್ನು ‘ಸೌಹಾರ್ದದ ಬಳಿ: ನಮ್ಮ ಕರಾವಳಿ’ ಎಂಬ ಧ್ಯೇಯದೊಂದಿಗೆ ನಡೆಸುತ್ತಿದ್ದೇವೆ. ಕರಾವಳಿಯ ಭಾಷೆಗಳ ವೈವಿಧ್ಯತೆಯಂತೆಯೇ ಸೌಹಾರ್ದತೆಯೂ ಇಲ್ಲಿ ಹಾಸು ಹೊಕ್ಕಾಗಿದೆ. ಹಾಗಾಗಿ ತುಳು, ಕೊಂಕಣಿ, ಮಲಯಾಳಂ ಸೇರಿ 8 ನಾಟಕಗಳು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಇದ್ದರು. ಸನ್ನುತ ನಿರೂಪಿಸಿದರು.ಬಯಲು ರಂಗ ವೇದಿಕೆಯ ಪಕ್ಕದಲ್ಲಿ ವಿವಿಧ ಕಲಾಕೃತಿಗಳ ಪ್ರದರ್ಶನ, ಕೊರಗರ ಸಾಂಪ್ರದಾಯಿಕ ಕೌಶಲ್ಯಗಳ ಪ್ರಾತ್ಯಕ್ಷಿಕೆ, ಹತ್ತಿಯಿಂದ ಕೈಮಗ್ಗದ ಬಟ್ಟೆಗಳನ್ನು ನೇಯುವ ಪ್ರಾತ್ಯಕ್ಷಿಕೆ ಇತ್ಯಾದಿಗಳನ್ನು ಏರ್ಪಡಿಸಲಾಗಿದೆ.............
ಪುರಾಣವನ್ನು ಇತಿಹಾಸವಾಗಿ ತಿರುಚುವ ಪ್ರಯತ್ನದ ಮೂಲಕ ನಾಡಿನ ವಿವೇಕ ನಾಶವಾಗುತ್ತಿದೆ. ನಾಡಿನ ಮೂಲ ಕಲ್ಪನೆಗಳನ್ನು ನಾಶ ಮಾಡಿ ಇತಿಹಾಸದ ಮೇಲೆ ಬೌದ್ಧಿಕ ದಾಳಿ ನಡೆಸುತ್ತಿರುವುದು ದೇಶದಲ್ಲಿ ಹೆಚ್ಚುತ್ತಿದ್ದು, ಇದರಿಂದ ಸಣ್ಣ ಸಂಸ್ಕೃತಿಗಳು ದೊಡ್ಡ ಅಪಾಯಕ್ಕೆ ಒಳಗಾಗಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಎಚ್ಚರಿಸಿದ್ದಾರೆ.
ನಾಡಿನ ಇತಿಹಾಸವನ್ನು ತಿರುಚುವ ತಂತ್ರಗಳ ಮೂಲಕ ರಾಜಕಾರಣಿಗಳು ತಮ್ಮ ಅಧಿಕಾರದ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಜನರು ರಾಜಕಾರಣಿಗಳ ಇಂತಹ ತಂತ್ರಗಾರಿಕೆಗೆ ಬಲಿಯಾಗಬಾರದು ಎಂದು ಹೇಳಿದರು.
ಈಗಾಗಲೇ ಕರಾವಳಿಯ ಮೂಲನಿವಾಸಿ ತಳ ಸಮುದಾಯಗಳ ಸಂಖ್ಯೆ, ಭಾಷೆ, ಸಂಸ್ಕೃತಿ ನಶಿಸುತ್ತಿದೆ. ಈ ಸಮುದಾಯಗಳೀಗ ಬೌದ್ಧಿಕ ದಾಳಿಯ ಪರಿಣಾಮವಾಗಿ ಹಿಂದುತ್ವದ ಕಡೆಗೆ ಸಾಗುತ್ತಿವೆ ಎಂದು ಖೇದ ವ್ಯಕ್ತಪಡಿಸಿದರು.
18ನೇ ಶತಮಾನದಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಕರಾವಳಿಗೆ ಬಂದು ವಿದ್ಯಾಸಂಸ್ಥೆಗಳನ್ನು ಕಟ್ಟಿದ್ದರಿಂದ ಹೆಚ್ಚಿನವರು ವಿದ್ಯಾವಂತರಾದರು. ಇತ್ತೀಚಿನ ವರ್ಷಗಳಲ್ಲಿ ಚರ್ಚ್ಗಳಿಗೆ ದಾಳಿ ನಡೆಸಿದ ಜನರಿಗೆ ಅವರ ಪೂರ್ವಜರು ಕ್ರಿಶ್ಚಿಯನ್ ಶಾಲೆಗಳಲ್ಲಿ ಕಲಿತದ್ದು ಎಂಬ ಅರಿವು ಇರುತ್ತಿದ್ದರೆ ಹೀಗೆ ಮಾಡುತ್ತಿರಲಿಲ್ಲ ಎಂದರು.