ಅಲೋಶಿಯಸ್ ವಿ.ವಿ.: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

KannadaprabhaNewsNetwork |  
Published : Mar 03, 2026, 02:45 AM IST
ಅಲೋಶಿಯಸ್ ವಿವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ | Kannada Prabha

ಸಾರಾಂಶ

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ವತಿಯಿಂದ ‘ವಿಜ್ಞಾನದಲ್ಲಿ ಮಹಿಳೆಯರು - ವಿಕಾಸಿತ ಭಾರತವನ್ನು ವೇಗಗೊಳಿಸುವುದು’ ಎಂಬ ವಿಷಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಗುರುವಾರ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ವತಿಯಿಂದ ‘ವಿಜ್ಞಾನದಲ್ಲಿ ಮಹಿಳೆಯರು - ವಿಕಾಸಿತ ಭಾರತವನ್ನು ವೇಗಗೊಳಿಸುವುದು’ ಎಂಬ ವಿಷಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಗುರುವಾರ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮಂಗಳೂರಿನ ಡಾ. ಪಿ. ದಯಾನಂದ ಪೈ - ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ, ಸಸ್ಯಶಾಸ್ತ್ರದ ಪ್ರಾಧ್ಯಾಪಕ ಪ್ರೊ. ಜಯಕರ ಭಂಡಾರಿ ಮುಖ್ಯ ಅತಿಥಿಯಾಗಿದ್ದರು. ಸುರತ್ಕಲ್‌ ಎನ್‌ಐಟಿಕೆಯಲ್ಲಿ ರಾಸಾಯನಿಕ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಪ್ರೊ. ವಿದ್ಯಾ ಶೆಟ್ಟಿ ಗೌರವ ಅತಿಥಿಯಾಗಿದ್ದರು. ಅಲೋಶಿಯಸ್ ವಿವಿಯ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಲೋಶಿಯಸ್ ವಿವಿಯ ಸಹಕುಲಪತಿ ರೆ.ಡಾ. ಮೆಲ್ವಿನ್ ಡಿ.ಕುನ್ಹಾ, ಎಸ್.ಜೆ., ವಿವಿಯ ರಿಜಿಸ್ಟ್ರಾರ್ ಡಾ. ರೊನಾಲ್ಡ್ ನಜರೆತ್, ಎಂಜಿನಿಯರಿಂಗ್ ಡೀನ್ ಡಾ. ರೂಬನ್ ಎಸ್., ಕ್ಸೇವಿಯರ್ ಬ್ಲಾಕ್‌ನ ನಿರ್ದೇಶಕಿ ಡಾ. ಅರುಣಾ ಕಲ್ಕುರ ಟಿ., ಎಲ್‌ಸಿಆರ್‌ಐ ಬ್ಲಾಕ್‌ನ ನಿರ್ದೇಶಕಿ ಡಾ. ಆಶಾ ಅಬ್ರಹಾಂ, ಕಾರ್ಯಕ್ರಮದ ಸಂಚಾಲಕಿ ಡಾ. ಜ್ಯೋತಿ ಮಿರಾಂಡಾ, ಸಹ ಸಂಚಾಲಕಿ ಡಾ. ಗೀತಾ ಪಿಂಟೊ, ಜೀವ ವಿಜ್ಞಾನದ ಡೀನ್ ಡಾ. ರೆನಿಟಾ ಮರಿಯಾ ಡಿ.ಸೋಜಾ ಇದ್ದರು.ಇತ್ತೀಚೆಗೆ ನಿಧನರಾದ ವಿಶ್ವಪ್ರಸಿದ್ಧ ವಿಜ್ಞಾನಿ ಮತ್ತು ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲ ದಿ. ರೆ. ಡಾ. ಲಿಯೋ ಡಿ ಸೋಜಾ ಎಸ್.ಜೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಜ್ಯೋತಿ ಮಿರಾಂಡಾ ಸ್ವಾಗತಿಸಿದರು. ಅಸೋಸಿಯೇಟ್ ಡೀನ್ ಡಾ. ಗೀತಾ ಪಿಂಟೊ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಅಕ್ಷಿತಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೆಲಕ್ಕೆ ಬೇಕಾಗುವ ಚಿಂತನೆ ಮಾಡೋದು ಸಾಹಿತ್ಯದ ಕೆಲಸ; ವೈ.ಎಂ.ಯಾಕೊಳ್ಳಿ
ನಿಡಗುಂದಿಯಲ್ಲಿ ಬೃಹತ್‌ ಶೋಭಾಯಾತ್ರೆ, ಕೇಸರಿಮಯ