ರಂಗಭೂಮಿ ಕಲಿಕೆ ನಿರಂತರ: ನಟಿ ಸಾಯಿಚೇತನ್‌

KannadaprabhaNewsNetwork |  
Published : Jun 07, 2026, 03:00 AM IST
ತುಳು ನಾಟಕ ಕಾರ್ಯಗಾರದ ಸಮಾರೋಪ ನಡೆಯಿತು | Kannada Prabha

ಸಾರಾಂಶ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉರ್ವ ಎಸ್.ಸಿ.ಎಸ್.ಪ್ರಥಮ‌ ದರ್ಜೆ ಕಾಲೇಜು ಸಹಯೋಗದಲ್ಲಿ ನಡೆದ ತುಳು ನಾಟಕ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉರ್ವ ಎಸ್.ಸಿ.ಎಸ್.ಪ್ರಥಮ‌ ದರ್ಜೆ ಕಾಲೇಜು ಸಹಯೋಗದಲ್ಲಿ ನಡೆದ ತುಳು ನಾಟಕ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ನಟ ಸಾಯಿ ಚೇತನ್ ಮಾತನಾಡಿ, ರಂಗಭೂಮಿಯ ಕಲಿಕೆ ನಿರಂತರವಾಗಿದ್ದು, ಸದಾ ಹೊಸತನದ ಅನ್ವೇಷಣೆ ನಡೆಯುತ್ತಿರುತ್ತದೆ. ವಿದ್ಯಾರ್ಥಿಗಳಿಗೆ ತುಳು ನಾಟಕ ತರಬೇತಿ ಕೈಗೊಂಡ ತುಳು ಸಾಹಿತ್ಯ ಅಕಾಡೆಮಿಯ ಕಾರ್ಯ ಶ್ಲಾಘನೀಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಕಾಲೇಜಿನಲ್ಲಿ ರಂಗಾಭ್ಯಾಸ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಯೋಚನೆ ಮೂಲಕ ಪಠ್ಯ ಅಧ್ಯಯನಕ್ಕೂ ಪೂರಕವಾಗುತ್ತದೆ ಎಂದರು.ತರಬೇತಿ ಕಾರ್ಯಾಗಾರದ ನಿರ್ದೇಶಕರಾದ ಯೋಗೀಶ್ ಶೆಟ್ಟಿ, ರಂಗ ನಿರ್ದೇಶಕ ಜಗನ್ ಪವಾರ್, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಸುಚಿತ್ರಾ ಪಿ.ಶೆಟ್ಟಿ ಇದ್ದರು.

ವಿದ್ಯಾರ್ಥಿಗಳಾದ ರಿತೇಶ್ ಪೂಜಾರಿ, ಶಶಾಂಕ್ ನಾಟಕ ಕಾರ್ಯಗಾರದ ಅನುಭವ ಹಂಚಿಕೊಂಡರು.ಪ್ರಾಂಶುಪಾಲ ಹಾರ್ದಿಕ್ ಪಿ.ಚೌಹಾಣ್ ಸ್ವಾಗತಿಸಿದರು. ವಿದ್ಯಾರ್ಥಿನಿ ಮೇಘ ನಿರೂಪಿಸಿದರು. ಕಾಲೇಜು ತುಳು ಸಂಘದ ಸಂಚಾಲಕಿ ದೀಕ್ಷಿತಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನದಿಗೆ ನೀರು ಬರಲಿಲ್ಲ; ಕಬ್ಬಿನ ಬಿಲ್‌ ಪಾವತಿ ಆಗಿಲ್ಲ
30ರಿಂದ ಮನೆ ಮನೆಗೆ ಭೇಟಿ, ಮಾಹಿತಿ ಸಂಗ್ರಹಣೆ: ಡಿಸಿ