ಕನ್ನಡಪ್ರಭ ವಾರ್ತೆ ಉಡುಪಿ
ಪುರುಷರ ವಿಭಾಗ ತಂಡ ಸ್ಪರ್ಧೆಯಲ್ಲಿ ಆಳ್ವಾಸ್ ಪ್ರಥಮ, ಕಲ್ಯಾಣಪುರ ಮಿಲಾಗ್ರಿಸ್ ದ್ವಿತೀಯ, ಹಾಗೂ ಅತಿಥೇಯ ತೆಂಕನಿಡಿಯೂರು ಕಾಲೇಜು ತೃತೀಯ ಸ್ಥಾನಗಳಿಸಿದರೆ, ತೆಂಕನಿಡಿಯೂರು ಶರತ್ ಕೆ. ಕುಮಾರ್ ಬಲಾಡ್ಯ ಪುರುಷ ಪ್ರಶಸ್ತಿ ಪಡೆದರು.
ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಪ್ರಥಮ, ಎಸ್.ಡಿ.ಎಂ. ಉಜಿರೆ ದ್ವಿತೀಯ ಹಾಗೂ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಸ್ಥಾನ ಪಡೆದರೆ, ಅಜ್ಜರಕಾಡು ಉಡುಪಿಯ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಐಶ್ವರ್ಯ ಬಲಾಡ್ಯ ಮಹಿಳೆ ಪ್ರಶಸ್ತಿ ಪಡೆದರು.ಮಂಗಳೂರು ವಿವಿ ವ್ಯಾಪ್ತಿಯ 23 ಕಾಲೇಜುಗಳಿಂದ ಸ್ಪರ್ಧಾಳುಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ., ಪಂದ್ಯಾಕೂಟದ ಉಸ್ತುವಾರಿ ಹಾಗೂ ಅಂತಾರಾಷ್ಟ್ರೀಯ ತೀರ್ಪುಗಾರರಾದ ಡಾ. ಹರಿದಾಸ್ ಕೂಳೂರು, ಉಡುಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್, ಆಳ್ವಾಸ್ ತರಬೇತುದಾರರಾದ ಪ್ರಮೋದ್ ಉಪಸ್ಥಿತರಿದ್ದರು.