ಪರಿಸರದ ಜೊತೆಗಿದ್ದರೆ ಆರೋಗ್ಯ ವೃದ್ಧಿ: ಯು.ಟಿ.ಖಾದರ್

KannadaprabhaNewsNetwork |  
Published : Jul 15, 2026, 03:00 AM IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಉದ್ಘಾಟಿಸಿದರು | Kannada Prabha

ಸಾರಾಂಶ

ಮಂಗಳೂರಿನ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಕ್ಯಾಂಪಸ್‌ನಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮ

ಮಂಗಳೂರು: ಪರಿಸರದ ಜೊತೆ ಇದ್ದರೆ ನಮ್ಮ ಅರೋಗ್ಯ ಸುಧಾರಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.

ಮಂಗಳೂರಿನ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಕ್ಯಾಂಪಸ್‌ನಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿ, ಬದ್ಧತೆ ಇರಬೇಕು. ಗಿಡ ನೆಟ್ಟ ಮೇಲೆ ಅದನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿರಬೇಕು. ಈ ಕಾರ್ಯವನ್ನು ಎಕ್ಸ್‌ಪರ್ಟ್ ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಬಂದಿದೆ. ಇಲ್ಲಿರುವ ಸಸ್ಯ ಪ್ರಭೇದಗಳ ವೈವಿಧ್ಯತೆ ಗಮನಾರ್ಹ ಎಂದರು.ಅವರು ಎಕ್ಸ್‌ಪರ್ಟ್ ಫ್ಲೋರಾ ವೆಬ್‌ಸೈಟಿಗೆ ಚಾಲನೆ ನೀಡಿದರು.

ಮೂಡುಬಿದಿರೆ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾತನಾಡಿ, ವಿದ್ಯಾರ್ಥಿಗಳು ತಾವು ನೆಟ್ಟ ಗಿಡಗಳ ಬಗ್ಗೆ ತಿಳಿವಳಿಕೆ ಹೊಂದಿರಬೇಕು. ಸಾಕುವ ಹೆತ್ತವರು ಮತ್ತು ದೇಶ ಕಾಯುವ ಸೈನಿಕರಿಗೆ ನಮನ ಸಲ್ಲಿಸುವ ನಾವು, ನಮ್ಮನ್ನು ಪೊರೆಯುವ ಪರಿಸರವನ್ನು ಎಂದಿಗೂ ಮರೆಯಬಾರದು ಎಂದರು.ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಕ್ಸ್‌ಪರ್ಟ್ ನ ಅಭಿವೃದ್ಧಿ ಕಾರ್ಯದಲ್ಲಿ ಪರಿಸರ ಸ್ನೇಹಿ ಕಾಳಜಿ ಇದೆ. ಪ್ರಕೃತಿಯ ಜೊತೆಗೆ ಕಲಿಯುವುದೇ ನಿಜವಾದ ಶಿಕ್ಷಣ. ಶಿಕ್ಷಣ ಪರಿಸರದೊಂದಿಗೆ ಇದ್ದಾಗ ಅರ್ಥಪೂರ್ಣವಾಗುತ್ತದೆ. ಪರಿಸರಕ್ಕೆ ನಾವು ನೀಡುವ ಕೊಡುಗೆ ಮರಳಿ ನಮಗೆ ಸಿಗುತ್ತದೆ ಎಂದರು.

ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಮಾತನಾಡಿ, ಎಕ್ಸ್‌ಪರ್ಟ್ ಕ್ಯಾಂಪಸ್‌ನಲ್ಲಿ ಸ್ಥಳೀಯ ತಳಿಗಳಿಗೆ ಪ್ರಾಧಾನ್ಯ ನೀಡಿ ಸಂರಕ್ಷಿಸಲಾಗಿದೆ ಎಂದರು.

ಸಂಸ್ಥೆಯ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್.ನಾಯಕ್, ಪ್ರಾಂಶುಪಾಲ ಸುಬ್ರಹ್ಮಣ್ಯ ಉಡುಪ, ಉಪಪ್ರಾಂಶುಪಾಲ(ಶೈಕ್ಷಣಿಕ) ಗುರುದತ್ತ ಎನ್., ಶೈಕ್ಷಣಿಕ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ, ಕ್ಯಾಂಪಸ್ ರೆಸಿಡೆಂಟ್ ಮೆಂಟರ್ ಅನಿತಾ ಪಿ.ಶೆಟ್ಟಿ, ಕಾರ್ಯಕ್ರಮ ನಿರ್ದೇಶಕಿ ಗಾಯತ್ರಿ ಕೆ. ಇದ್ದರು.

ವಿದ್ಯಾರ್ಥಿನಿ ಪೂರ್ವಿ ಜಿ.ಬಿ. ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನೆರವಿಗೆ ಬಾರದೇ ಸಂಪುಟ ವಿಸ್ತರಣೆಯಲ್ಲಿ ಕಾಲಹರಣ: ನಿಖಿಲ್‌ ಕುಮಾರಸ್ವಾಮಿ
ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ