ಕನ್ನಡಪ್ರಭ ವಾರ್ತೆ ಕಲಬುರಗಿ
ಜಿಲ್ಲಾ ಕಾಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತು ಮರುಹಂಚಿಕೆ ಮಾಡುವ ಜೊತೆಗೆ ಮಂಗಳಸೂತ್ರ, ಚಿನ್ನ ಕಸಿಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರೋದು ತಳಬುಡವೇ ಇಲ್ಲದ ಹೇಳಿಕೆ. 10 ವರ್ಷದ ಸುದೀರ್ಘ ಆಡಳಿತ ಮಾಡಿಯೂ ಒಂದೇ ಒಂದು ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಮೋದಿಯವರು, ಅತ್ಯಂತ ನಿರ್ಲಜ್ಜರಾಗಿ ಹಾಗೂ ಸಂವೇದನಾಶೂನ್ಯರಾಗಿ ಮಾತಾಡುತ್ತಿದ್ದಾರೆ. ಪ್ರಧಾನಿ ಹುದ್ದೆಯಲ್ಲಿದ್ದವರಿಗೆ ಇದು ಶೋಭೆಯಲ್ಲ ಎಂದು ಕುಟುಕಿದರು.
ಮಂಗಳಸೂತ್ರ ಎಂಬುದು ಮಹಿಳೆಯರ ಭಾವನಾತ್ಮಕ ವಿಚಾರ. ಯಾವ ವಿಚಾರವನ್ನು ಸಹಿಸಿದರೂ ಮಾಂಗಲ್ಯ ವಿಚಾರವನ್ನು ಯಾವ ಮಹಿಳೆಯೂ ಸಹಿಸಲಾರಳು, ಇದು ಪ್ರಧಾನಿಯವರಿಗೆ ಗೊತ್ತಿರಲಿ ಎಂದರು.ನಮ್ಮರೈತಾಪಿ ಮಹಿಳೆಯರು ಬರಗಾಲ ಬಿದ್ದಾಗ ಹೊಲ ಬೆಳೆಯದೆ ಸಮಸ್ಯೆ ಶುರುವಾದಾಗ ತಮ್ಮ ಕೊರಳ ತಾಳಿ, ಆಭರಣ ಅಡವಿಟ್ಟು ಮನೆ ನಡೆಸುತ್ತಾರೆ. ಅಂತಹ ಸ್ವಾಭಿಮಾನಿತನ ಅವರಲ್ಲಿ ಇಂದಿಗೂ ಕಾಣುತ್ತೇವೆ. ಪ್ರಧಾನಿ ಹೇಳಿಕೆಗೆ ಮಹಿಳೆಯರೇ ಮಾರುತ್ತರ ನೀಡುತ್ತಾರೆಂದರು.
1962ರ ಯುದ್ದದ ವೇಳೆ ಇಂದಿರಾ ಗಾಂಧಿ ಅವರು ತಮ್ಮ ಆಭರಣಗಳನ್ನೇ ದಾನ ಮಾಡಿದ್ದರು. 1962ರಲ್ಲಿ ಭಾರತ - ಚೀನಾ ಯುದ್ಧ ನಡೆದ ವೇಳೆ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಆಭರಣ ದಾನ ಮಾಡಿದ್ದಾರೆ. ಸೋನಿಯಾ ಗಾಂಧಿ ತಮ್ಮ ಮಾಂಗಲ್ಯ ದೇಶಕ್ಕಾಗಿ ಬಲಿ ಕೊಟ್ಟಿದ್ದಾರೆ.
ಇಂತಹ ಮಾಂಗಲ್ಯ ಕಸಿಯುವ ಬಿಜೆಪಿಯಿಂದ ದೇಶದ ಮಹಿಳೆಯರ ಜೀವನಕ್ಕೆ ಭದ್ರತೆ ದೊರೆಯುವುದು ಅಸಾಧ್ಯ. ಇವರಿಗೆ ಚುನಾವಣೆಯಲ್ಲಿ ಜನರೇ ಬುದ್ಧಿ ಕಲಿಸುತ್ತಾರೆಂದು ಡಾ. ಅಜಯ್ ಸಿಂಗ್ ಅಭಿಪ್ರಾಯಪಟ್ಟರು.