
ಕನ್ನಡಪ್ರಭ ವಾರ್ತೆ ಮಂಗಳೂರು
ವಂಚನೆಯ ಮೊತ್ತ ೧೦ ಕೋ.ರು. ಮತ್ತು ಅದಕ್ಕಿಂತ ಹೆಚ್ಚಿದ್ದರೆ ಸಿಐಡಿಗೆ ವರ್ಗಾಯಿಸಲು ಅವಕಾಶವಿದೆ. ಅದರಂತೆ ೧೦ ಕೋ.ರು. ಮೊತ್ತದ ಪ್ರಕರಣದ ತನಿಖೆ ನಡೆಸುವಂತೆ ಈ ಮೊದಲೇ ಸಿಐಡಿ ಪತ್ರ ಬರೆಯಲಾಗಿತ್ತು. ಇದೀಗ ಸಿಐಡಿ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಬಿಹಾರ ಮೂಲದ ಉದ್ಯಮಿಯೊಬ್ಬರು ಭೂ ಖರೀದಿ ವಿಚಾರದಲ್ಲಿ ವಂಚನೆಗೆ ಒಳಗಾದ ಪ್ರಕರಣ ಇದಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಠಾಣೆಯಲ್ಲಿ ದಾಖಲಾಗಿರುವ ಇತರ ಪ್ರಕರಣಗಳ ತನಿಖೆಯನ್ನು ಪೊಲೀಸರೇ ತನಿಖೆ ನಡೆಸಲಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ತಿಳಿಸಿದ್ದಾರೆ.ಈ ಮಧ್ಯೆ ಸೋಮವಾರ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ತನಗೆ ರೋಶನ್ನಿಂದ ೧ ಕೋ.ರು. ವಂಚನೆ ಆಗಿದೆ ಎಂದು ಪೊಲೀಸ್ ಕಮಿಷನರಿಗೆ ದೂರು ನೀಡಿದ್ದಾರೆ. ಆತನ ದೂರನ್ನು ಆಧರಿಸಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೋಶನ್ನ ಇನ್ನಷ್ಟು ಖಾತೆಗಳನ್ನು ಪತ್ತೆಹಚ್ಚಲಾಗಿದ್ದು, ೫೦ ಕೋ.ರು. ಹೆಚ್ಚು ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ವಂಚನೆಗೆ ಒಳಗಾದವರನ್ನು ಪತ್ತೆ ಹಚ್ಚಲಾಗುತ್ತಿದೆ. ರೋಶನ್ನಿಂದ ವಂಚನೆಗೆ ಒಳಗಾದವರು ಯಾರೇ ಆದರೂ ದೂರು ನೀಡಲು ಅವಕಾಶವಿದ್ದು, ಮಂಗಳೂರಿಗೆ ಬಂದು ಅಥವಾ ತಮ್ಮ ವ್ಯಾಪ್ತಿಯ ಠಾಣೆಯಲ್ಲಿ ದೂರು ನೀಡಬಹುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ರೋಶನ್ನನ್ನು ಕಸ್ಟಡಿಗೆ ಪಡೆಯುವ ನಿಟ್ಟಿನಲ್ಲಿ ಪೊಲೀಸರು ಪೂರಕ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದಾರೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಜು.೨೩ರಂದು ಆತನನ್ನು ವಶಕ್ಕೆ ಪಡೆಯಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.