ನೈಋತ್ಯ ರೈಲ್ವೇ ವ್ಯಾಪ್ತಿಗೆ ಮಂಗಳೂರು: ಇಲಾಖೆ ಸ್ಪಷ್ಟನೆ

KannadaprabhaNewsNetwork |  
Published : Aug 25, 2026, 03:15 AM IST
ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಬಲ್ದೋಟ ಕಂಪನಿ ಆರಂಭಿಸಿ ಎಂದು ಕಂಪನಿಗೆ ಭೂಮಿ ನೀಡಿರುವ ರೈತರು ಪ್ರತಿಭಟನೆ ಮೂಲಕ ಒತ್ತಾಯಿಸಿದ್ದಾರೆ. | Kannada Prabha

ಸಾರಾಂಶ

ರೈಲ್ವೆಯ ಪಾಲಕ್ಕಾಡ್‌ ವಿಭಾಗದಿಂದ ಮಂಗಳೂರು ಕರ್ನಾಟಕದ ನೈಋತ್ಯ ರೈಲ್ವೆ ಮೈಸೂರು ವಿಭಾಗಕ್ಕೆ ತಂದಿರುವುದರಿಂದ ಕೇರಳವು ತನ್ನ ಯಾವುದೇ ನಿಲ್ದಾಣಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮಂಗಳೂರು: ರೈಲ್ವೆಯ ಪಾಲಕ್ಕಾಡ್‌ ವಿಭಾಗದಿಂದ ಮಂಗಳೂರು ಕರ್ನಾಟಕದ ನೈಋತ್ಯ ರೈಲ್ವೆ ಮೈಸೂರು ವಿಭಾಗಕ್ಕೆ ತಂದಿರುವುದರಿಂದ ಕೇರಳವು ತನ್ನ ಯಾವುದೇ ನಿಲ್ದಾಣಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.ಈ ಬದಲಾವಣೆ ಸಂಪೂರ್ಣವಾಗಿ ಆಡಳಿತಾತ್ಮಕ ಸ್ವರೂಪದ್ದಾಗಿದ್ದು, ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಇದರಿಂದ ಮಂಗಳೂರು ಹಾಗೂ ಕರಾವಳಿ ಘಟ್ಟ ಪ್ರದೇಶಕ್ಕೆ ಒಂದೇ ಕೇಂದ್ರದಿಂದ ಕಾರ್ಯಾಚರಣಾ ನಿಯಂತ್ರಣ ದೊರೆಯಲಿದೆ. ಮಂಗಳೂರು ನಗರವು ಕರ್ನಾಟಕದಲ್ಲಿರುವುದರಿಂದ ಕೇರಳವು ಯಾವುದೇ ನಿಲ್ದಾಣವನ್ನು ಕಳೆದುಕೊಳ್ಳುವುದಿಲ್ಲ. ಪಾಲಕ್ಕಾಡ್ ವಿಭಾಗವು ಕೇರಳದ ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್ ಮತ್ತು ತಿರುಸ್ಸುರ್ ಜಿಲ್ಲೆಗಳಲ್ಲಿರುವ ತನ್ನ ಸಂಪೂರ್ಣ ರೈಲ್ವೆ ಪ್ರದೇಶವನ್ನು ಮುಂದುವರಿಸಿಕೊಂಡಿರುತ್ತದೆ.

ರೈಲ್ವೆಯ ಯಾವುದೇ ವಿಭಾಗ ಅಥವಾ ವಲಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಾಡುವ ಹೂಡಿಕೆಯು ಆ ವಿಭಾಗ ಅಥವಾ ವಲಯದ ಆದಾಯವನ್ನು ಆಧರಿಸಿರುವುದಿಲ್ಲ. ಬದಲಾಗಿ, ರೈಲ್ವೆ ಜಾಲದ ಅಗತ್ಯತೆ ಮತ್ತು ಕಾರ್ಯಾಚರಣಾ ಅವಶ್ಯಕತೆಗಳ ಆಧಾರದ ಮೇಲೆ ಹೂಡಿಕೆ ಮಾಡಲಾಗುತ್ತದೆ.

ಕಳೆದ ಒಂದು ದಶಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇರಳದ ರೈಲ್ವೆ ಜಾಲಕ್ಕೆ ನೀಡಲಾಗುತ್ತಿರುವ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಕೇರಳದಲ್ಲಿ ರೈಲ್ವೆ ಜಾಲದ ಅಭಿವೃದ್ಧಿಗೆ ಸ್ಪಷ್ಟವಾದ ಕಾರ್ಯ ಯೋಜನೆಯೂ ರೂಪಿಸಲಾಗಿದೆ. ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗಾಗಿ ಕೇರಳಕ್ಕೆ ನೀಡಲಾಗುವ ವಾರ್ಷಿಕ ಸರಾಸರಿ ಅನುದಾನವು ಯುಪಿಎ ಅವಧಿಯ 372 ಕೋಟಿ ರು.ಯಿಂದ 2026-27ನೇ ಸಾಲಿನಲ್ಲಿ 3,795 ಕೋಟಿ ರು.ಗೆ ಏರಿಕೆಯಾಗಿದೆ. ಅಂದರೆ, ಈ ಅನುದಾನವು ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ.ಕಳೆದ 12 ವರ್ಷಗಳಲ್ಲಿ ಈ ಹೂಡಿಕೆಯು ಕೇರಳದಲ್ಲಿ ಗಣನೀಯ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳಿಗೆ ಕಾರಣವಾಗಿದೆ. ಇದರಲ್ಲಿ ಆರು ದ್ವಿ ಜೋಡಿಮಾರ್ಗ/ಗೇಜ್ ಪರಿವರ್ತನಾ ಯೋಜನೆಗಳ ಪೂರ್ಣಗೊಳಿಸುವಿಕೆ, 131 ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳ ನಿರ್ಮಾಣ, ರೈಲ್ವೆ ಜಾಲದ ಶೇ.100ರಷ್ಟು ವಿದ್ಯುದೀಕರಣ ಹಾಗೂ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 16 ನಿಲ್ದಾಣಗಳ ಪುನರ್‌ಅಭಿವೃದ್ಧಿ ಸೇರಿವೆ.ಕೇರಳದ ಜನತೆ ಈ ನಿರ್ಧಾರವನ್ನು ರೈಲು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸುವ ಮತ್ತು ರೈಲು ಸೇವೆಗಳನ್ನು ಇನ್ನಷ್ಟು ಸುಗಮಗೊಳಿಸುವ ದೃಷ್ಟಿಕೋನದಿಂದ ಪರಿಗಣಿಸಬೇಕೆಂದು ವಿನಂತಿಸುತ್ತೇವೆ ಎಂದು ರೈಲ್ವೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟಿ ವೃಕ್ಷ ಅಭಿಯಾನದಿಂದ ಅರಣ್ಯ ಪ್ರದೇಶ ಶೇ.2.4ಕ್ಕೆ ಏರಿಕೆ: ಪ್ರಶಾಂತ.ಪಿ.ಕೆ.ಎಂ
ಸಾಧನೆಗೆ ಆತ್ಮವಿಶ್ವಾಸವೇ ಶಿಖರ: ಮಂಗಳಾನಾಥನಂದಜೀ ಮಹಾರಾಜ್