ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದ ಸಮೀಪದಲ್ಲಿರುವ ಕನ್ನಡಪ್ರಭ ರೈತರತ್ನ ಪಿ.ದಯಾನಂದ್ ಅವರ ಶುದ್ಧ ಪಾರಂ ವಿವಿಧ ತಳಿ ಮಾವಿನಹಣ್ಣುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ಚಿಂಚಳ್ಳಿ ಗ್ರಾಮದ ಸಮೀಪದಲ್ಲಿರುವ ಕನ್ನಡಪ್ರಭ ರೈತರತ್ನ ಪಿ.ದಯಾನಂದ್ ಅವರ ಶುದ್ಧ ಪಾರಂನಲ್ಲಿ ಮಕ್ಕಳಿಗೆ ಮನರಂಜನೆಯ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಶಾಲಾ ವಿದ್ಯಾರ್ಥಿಗಳಿಗೆ ಮಾವಿನಹಣ್ಣು ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಈ ವಿಶೇಷ ಕಾರ್ಯಕ್ರಮದಲ್ಲಿ ಹನೂರು ತಾಲೂಕಿನ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆ ಮತ್ತು ಚಿಂಚಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಂದ ಒಟ್ಟು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಮಣಗಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಚಂದನ್ 9 ಮಾವಿನ ಹಣ್ಣುಗಳನ್ನು ತಿಂದು ಪ್ರಥಮ ಸ್ಥಾನ ಪಡೆದುಕೊಂಡರೆ, ನಿಶಾಂತ್ ಎಂಬ ವಿದ್ಯಾರ್ಥಿ 8 ಹಣ್ಣುಗಳನ್ನು ತಿಂದು ದ್ವಿತೀಯ ಸ್ಥಾನ ಗಳಿಸಿದರು.ಈ ಸಂದರ್ಭದಲ್ಲಿ ಶುದ್ಧ ಫಾರ್ಮ್ ನ ಮಾಲೀಕ ದಯಾನಂದ ಮಾತನಾಡಿ “ನನ್ನ ಜಮೀನಿನಲ್ಲಿ ಬೆಳೆಯಲಾದ ವಿವಿಧ ತಳಿ ಮಾವಿನ ಹಣ್ಣುಗಳನ್ನು ಮಕ್ಕಳಿಗೆ ಪರಿಚಯ ಮಾಡಿಸುವ ಮೂಲಕ ಮಕ್ಕಳು ಸಾಕಷ್ಟು ಹಣ್ಣನ್ನು ತಿಂದು ಸಂಭ್ರಮಿಸಲಿ ಎಂಬ ಉದ್ದೇಶದಿಂದ ಸ್ಪರ್ಧೆ ಆಯೋಜನೆ ಮಾಡಿದ್ದು, ಮಣಗಳ್ಳಿ ಮತ್ತು ಚಿಂಚಳ್ಳಿ ಶಾಲಾ ಮಕ್ಕಳು ತುಂಬಾ ಉತ್ಸಾಹದಿಂದ ಭಾಗವಹಿಸಿದ್ದು, ಅವರಿಗೆ ನಮ್ಮ ಫಾರಂನಲ್ಲಿ 80ಕ್ಕೂ ಹೆಚ್ಚು ಮಾವಿನ ತಳಿಗಳನ್ನು ಪರಿಚಯ ಮಾಡಿಕೊಡಲಾಯಿತು. ಪ್ರತಿಯೊಂದು ತಳಿಗಳ ಪ್ರಯೋಜನವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಮಾಹಿತಿ ಹಾಗೂ ಮಾವಿನ ಪ್ರಯೋಜನ ತಿಳಿದುಕೊಂಡಿರುವುದು ಸಂತಸದ ವಿಚಾರ ಎಂದರು.ಕಾರ್ಯಕ್ರಮದಲ್ಲಿ ಮಣಗಳ್ಳಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶಿವಶಂಕರ್, ಹಾಗೂ ಚಿಂಚಳ್ಳಿ ಶಾಲೆಯ ಶಿಕ್ಷಕರಾದ ಜಯಶಂಕರ್ ಮತ್ತು ರಾಜು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.