ಕನ್ನಡಪ್ರಭ ವಾರ್ತೆ ಬೆಳಗಾವಿ
ಈ ವೇಳೆ ಮಾತನಾಡಿದ ಅವರು, ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಬೆಳಗಾವಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರು ಮೇಳದಲ್ಲಿ ಭಾಗವಹಿಸಿ, ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ಹಾಗೂ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ ರೈತರು ತಮ್ಮ ಮಾವುಗಳನ್ನು ಮಾರಾಟಕ್ಕೆ ಇರಿಸಿದ್ದಾರೆ. ಜೊತೆಗೆ ಮಹಾರಾಷ್ಟ್ರದ ದೇವಗಡ, ಪಂಢರಪುರದಿಂದ ಕೂಡ ರೈತರು ತಮ್ಮ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಆಗಮಿಸಿದ್ದಾರೆ. ಅಲ್ಫಾನ್ಸೋ, ಕೇಸರ್, ಗೋವಾ ಮಂಕೂರ, ಮಲ್ಲಿಕಾ, ಬಿಟ್ಕಿ ಸೇರಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಸಾರ್ವಜನಿಕರು ನೇರವಾಗಿ ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಸದುಪಯೋಗ ಪಡೆಯುವಂತೆ ತಿಳಿಸಿದರು.ಮಾವಿನ ಹಣ್ಣುಗಳ ಪ್ರದರ್ಶನ:
ರೈತರು ಸಾವಯವ ಕೃಷಿ ಕೈಗೊಂಡು ಬೆಳೆದ ಮಾವುಗಳನ್ನು ವಿಶೇಷವಾಗಿ ತೋಟಗಾರಿಕಾ ಇಲಾಖೆಯಿಂದ ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಮಾರಾಟ ಮಾಡಲು ಅನುಕೂಲವಾಗುತ್ತದೆ. ಜೊತೆಗೆ ಸಾರ್ವಜನಿಕರು ಕೂಡ ಗುಣಮಟ್ಟದ ಮಾವುಗಳನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ (ಒಂದು ಡಜನ್ಗೆ ₹ 400 ರಿಂದ ₹ 700 ರವರೆಗೆ) ಖರೀದಿಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಾವಿನ ಹಣ್ಣುಗಳನ್ನು ಖರೀದಿ ಮಾಡಬೇಕು ಎಂದು ಮನವಿ ಮಾಡಿದರು.