ಮಣಿಪಾಲ - ಕ್ವೆಸ್ ಕಾರ್ಪ್‌ಗೆ ಕೆಎಚ್‌ಸಿಸಿಎಲ್ - 2025 ಟ್ರೋಫಿ

KannadaprabhaNewsNetwork |  
Published : Jan 20, 2025, 01:33 AM IST
ಕ್ರೀಡೆ | Kannada Prabha

ಸಾರಾಂಶ

ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ಕಸ್ತೂರ್ಬಾ ಹಾಸ್ಪಿಟಲ್ - ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್‌ಸಿಸಿಎಲ್ - 2025) ಯಶಸ್ವಿಯಾಗಿ ಮುಕ್ತಾಯವಾಯಿತು. ಭಾಗವಹಿಸಿದ್ದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.

ಕಾರ್ಪೊರೇಟ್ ಸಂಸ್ಥೆ, ಬ್ಯಾಂಕ್‌, ವೈದ್ಯಕೀಯ ಸಂಘ, ಆಸ್ಪತ್ರೆ, ಮಾಧ್ಯಮ ಮಿತ್ರರ ನಡುವೆ ನಡೆದ ಪಂದ್ಯಾಟ

ಕನ್ನಡಪ್ರಭ ವಾರ್ತೆ ಮಣಿಪಾಲ

ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ಕಸ್ತೂರ್ಬಾ ಹಾಸ್ಪಿಟಲ್ - ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್‌ಸಿಸಿಎಲ್ - 2025) ಯಶಸ್ವಿಯಾಗಿ ಮುಕ್ತಾಯವಾಯಿತು. ಭಾಗವಹಿಸಿದ್ದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೋಧನಾ ಆಸ್ಪತ್ರೆಯ ಸಿಓಓ ಡಾ ಆನಂದ್ ವೇಣುಗೋಪಾಲ್, ಕೆಎಂಸಿ ಡೀನ್ ಡಾ ಪದ್ಮರಾಜ್ ಹೆಗ್ಡೆ, ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಮತ್ತು ಅದಾನಿ ಪವರ್ ಲಿ ನ ಸ್ಟೇಷನ್ ಹೆಡ್ ಶ್ರೀಧರ್ ಗಣೇಶನ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.ಡಾ ಅವಿನಾಶ್ ಶೆಟ್ಟಿ ಅವರು ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳು ತೋರಿದ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ಸಮುದಾಯದ ಸಂಬಂಧ ಗಟ್ಟಿಗೊಳಿಸಿ ಬೆಳೆಸುವಲ್ಲಿ ಮತ್ತು ಬಲವಾದ ಕಾರ್ಪೊರೇಟ್ ನೆಟ್‌ವರ್ಕ್‌ಗಳನ್ನು ನಿರ್ಮಿಸುವಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರವನ್ನು ಒತ್ತಿ ಹೇಳಿದರು.ಈ ಬಾರಿಯ ಕೆಎಚ್‌ಸಿಸಿಎಲ್ ಟ್ರೋಫಿಯನ್ನು ಕ್ವೆಸ್ ಕಾರ್ಪ್ ಮಣಿಪಾಲದ ತಂಡ ಪಡೆದುಕೊಂಡಿತು. ಅದಾನಿ ಪವೆರ್ ಲಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿತು. ಗಣೇಶ್ ಸರಣಿ ಶ್ರೇಷ್ಠ, ಸುಕೇಶ್ ಅತ್ಯುತ್ತಮ ಬ್ಯಾಟಿಂಗ್ ಮತ್ತು ಜಾಯ್ ಅಸಾಧಾರಣ ಬೌಲಿಂಗ್ ಕೌಶಲ್ಯಕ್ಕಾಗಿ ಪ್ರಶಸ್ತಿಗಳನ್ನು ಪಡೆದರು.ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್, ಜಿಬು ಥಾಮಸ್ , ಮೋಹನ್ ಶೆಟ್ಟಿ, ಕೃಷ್ಣಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ