ಕನ್ನಡಪ್ರಭ ವಾರ್ತೆ ಮೂಲ್ಕಿ
ಕಿನ್ನಿಗೋಳಿ ವಿಜಯಾ ಕಲಾವಿದರ ಅಧ್ಯಕ್ಷ ಮುಂಡ್ಕೂರು ದೊಡ್ಡಮನೆ ಶರತ್ ಶೆಟ್ಟಿ ಮಾಹಿತಿ ನೀಡಿ, ಹರೀಶ್ ಪಡುಬಿದ್ರಿ ರಚನೆಯ ನಾಟಕವನ್ನು ವಿಜಯಕುಮಾರ್ ಕೊಡಿಯಾಲ್ಬೈಲ್ ನಿರ್ದೇಶಿಸಲಿದ್ದಾರೆ. ಸಂಗೀತ ದಿನೇಶ್ ಪಾಪು ಮುಂಡ್ಕೂರು, ರಂಗವಿನ್ಯಾಸ ಹಾಗೂ ಧ್ವನಿ-ಬೆಳಕನ್ನು ಸುರೇಶ್ ಸಾಣೂರು, ಗೀತಾ ಸಾಹಿತ್ಯವನ್ನು ಅಶೋಕ್ ಪಳ್ಳಿ ನೀಡಲಿದ್ದಾರೆ, ಪ್ರಥಮ ಪ್ರದರ್ಶನವನ್ನು ಆ.27ರಂದು ಪಕ್ಷಿಕೆರೆ-ಪಂಜದಲ್ಲಿ ನೀಡಲಿದ್ದೇವೆ ಎಂದು ಮಾಹಿತಿ ನೀಡಿದರು.ಜನವರಿಯಲ್ಲಿ ಗುಜರಾತ್ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಪ್ರಕಾಶ ಎಂ. ಶೆಟ್ಟಿ ಸುರತ್ಕಲ್ ಇವರ ಸಂಚಾಲಕತ್ವದಲ್ಲಿ ಪ್ರವಾಸ ನಡೆಯಲಿದೆ ಎಂದರು. ಕೊಡೆತ್ತೂರು ಗುತ್ತುವಿನಲ್ಲಿ ನಾಟಕದ ಪೋಸ್ಟರ್ನ್ನು ಗುತ್ತಿನಾರ್ ನಿತಿನ್ ಶೆಟ್ಟಿ ಕೊಡೆತ್ತೂರು ಲೋಕಾರ್ಪಣೆಗೊಳಿಸಿದರು. ಸಮಾಜ ಸೇವಕ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು ಹೊಸಮನೆ, ಉದ್ಯಮಿ ಮುಂಬೈ ಸದಾಶಿವ ಪೂಜಾರಿ ಏಳಿಂಜೆ, ಅನುಗ್ರಹ ಪೃಥ್ವಿರಾಜ್ ಆಚಾರ್ಯ, ಮೂಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಜೈ ತುಳುನಾಡ್ ಸಂಘಟನೆಯ ಅಧ್ಯಕ್ಷ ತಾಳಿಪಾಡಿಗುತ್ತು ಉದಯ ಪೂಂಜಾ, ಕಿನ್ನಿಗೋಳಿ ಯಕ್ಷಲಹರಿಯ ಅಧ್ಯಕ್ಷ ರಘುನಾಥ ಕಾಮತ್ ಕೆಂಚನಕೆರೆ, ಮುಂಡ್ಕೂರು ದೊಡ್ಡಮನೆ ಸ್ವರಾಜ್ ಶೆಟ್ಟಿ, ಕಿನ್ನಿಗೋಳಿ ಸಜ್ಜನ ಬಂಧುಗಳು ಸಂಘಟನೆಯ ದಾಮೋದರ ಶೆಟ್ಟಿ ಕೊಡೆತ್ತೂರು ಗುತ್ತು, ಅರುಣ್ ಶೆಟ್ಟಿ ಕೊಡೆತ್ತೂರು ಗುತ್ತು, ಹರೀಶ್ ಶೆಟ್ಟಿ ಏಳಿಂಜೆ, ಸಮಾಜ ಸೇವಕಿ ಸರೋಜಿನಿ ಅಂಚನ್ ಮಧ್ಯ, ನಾಟಕ ರಚನೆಕಾರ ಹರೀಶ್ ಪಡುಬಿದ್ರಿ, ಸಂಗೀತ ನಿರ್ದೇಶಕ ದಿನೇಶ್ ಪಾಪು ಮುಂಡ್ಕೂರು, ಕಲಾವಿದರಾದ ನರೇಂದ್ರ ಕೆರೆಕಾಡು, ಕಾಪೇಡಿಗುತ್ತು ಸೀತಾರಾಮ ಶೆಟ್ಟಿ ಎಳತ್ತೂರು, ಭಗವಾನ್ ಸುರತ್ಕಲ್, ಚಿತ್ರಾ ಸುರತ್ಕಲ್, ಶಶಿ ಗುಜರನ್ ಪಡುಬಿದ್ರಿ, ಉದಯಕುಮಾರ್ ಹಳೆಯಂಗಡಿ, ಭಾಸ್ಕರ ಕುಲಾಲ್ ಪಕ್ಷಿಕೆರೆ, ರಾಜೇಶ್ ಅಮೀನ್ ಕಡಂದಲೆ, ಸತೀಶ್ ಪಿಲಾರ್, ಕೃತಿಕಾ ಉಲ್ಲಂಜೆ, ದೀಕ್ಷಿತಾ ಕೆರೆಕಾಡು, ಮಂಜೂಷಾ ಸುರತ್ಕಲ್ ಮತ್ತಿತರರು ಉಪಸ್ಥಿತರಿದ್ದರು.ತಂಡದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಬಿ.ಬಿ. ಏಳಿಂಜೆ ಸ್ವಾಗತಿಸಿದರು, ಪ್ರಕಾಶ್ ಆಚಾರ್ಯ ವಂದಿಸಿದರು, ಸುಧಾಕರ ಸಾಲ್ಯಾನ್ ಸಂಕಲಕರಿಯ ಕಾರ್ಯಕ್ರಮ ನಿರೂಪಿಸಿದರು.