ಮಂಜೇಥಿಯಾದಿಂದ ಹುಬ್ಬಳ್ಳಿಯಲ್ಲಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಚಿಂತನೆ

KannadaprabhaNewsNetwork |  
Published : Jul 09, 2026, 12:45 AM IST
ಕಾರ್ಯಕ್ರಮವನ್ನು ಚಿಟಗುಪ್ಪಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಉದ್ಘಾಟಿಸಿದರು. | Kannada Prabha

ಸಾರಾಂಶ

ಮುಂಬೈನಲ್ಲಿ ಪುನರ್ವಸತಿ ಕೇಂದ್ರವೊಂದನ್ನು ತೆರೆಯಲಾಗಿದ್ದು, ಅಲ್ಲಿ ಬಹಳಷ್ಟು ವಿಭಾಗಗಳಿವೆ. ಅಲ್ಲಿ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ಹುಬ್ಬಳ್ಳಿಯಲ್ಲೂ ಪುನರ್ವಸತಿ ಕೇಂದ್ರ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮಜೇಥಿಯಾ ಫೌಂಡೇಶನ್ ಚೇರ್‌ಮನ್ ಡಾ. ಜಿತೇಂದ್ರ ಮಜೇಥಿಯಾ ಅಭಿಪ್ರಾಯ ಪಟ್ಟರು.

ಹುಬ್ಬಳ್ಳಿ:

ಮುಂಬೈನಲ್ಲಿ ಪುನರ್ವಸತಿ ಕೇಂದ್ರವೊಂದನ್ನು ತೆರೆಯಲಾಗಿದ್ದು, ಅಲ್ಲಿ ಬಹಳಷ್ಟು ವಿಭಾಗಗಳಿವೆ. ಅಲ್ಲಿ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ಹುಬ್ಬಳ್ಳಿಯಲ್ಲೂ ಪುನರ್ವಸತಿ ಕೇಂದ್ರ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮಜೇಥಿಯಾ ಫೌಂಡೇಶನ್ ಚೇರ್‌ಮನ್ ಡಾ. ಜಿತೇಂದ್ರ ಮಜೇಥಿಯಾ ಅಭಿಪ್ರಾಯ ಪಟ್ಟರು.

ಗುರುವಾರ ಇಲ್ಲಿನ ಹು-ಧಾ ಮಹಾನಗರ ಪಾಲಿಕೆ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆರಂಭಿಸಿರುವ ಮಜೇಥಿಯಾ ಫೌಂಡೇಶನ್‌ನ ಉಚಿತ ಫಿಜಿಯೋಥೆರಪಿ ಕೇಂದ್ರದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಟಗುಪ್ಪಿಯಲ್ಲಿ ಆಸ್ಪತ್ರೆಯಲ್ಲಿ ನಮ್ಮ ಸಂಸ್ಥೆಯಿಂದ ಫಿಜಿಯೋಥೆರಪಿ ಕೇಂದ್ರ ಸ್ಥಾಪಿಸಿಕೊಡುತ್ತೇವೆಂದು ಮುಖ್ಯವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಅವರನ್ನು ಕೇಳಿಕೊಂಡಾಗ ಅವರು ಒಪ್ಪಿಗೆ ಸೂಚಿಸಿದರು. ಅದರಂತೆಯೇ ಈಗ ಕಾರ್ಯಾರಂಭ ಮಾಡಿದ್ದು, 2 ವರ್ಷದಲ್ಲಿ 1836 ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಇನ್ನೂ 5543 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಚಿಟಗುಪ್ಪಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಉದ್ಘಾಟಿಸಿ ಮಾತನಾಡಿ, 2 ವರ್ಷದ ಹಿಂದೆ ಫಿಜಿಯೋಥೆರಪಿ ಕೇಂದ್ರ ಆರಂಭಿಸಲಾಗಿದೆ. ಫೌಂಡೇಶನ್‌ನಿಂದ ಇನ್ನಷ್ಟು ನೆರವು ಪಡೆದು ರೋಗಿಗಳಿಗೆ ಚಿಕಿತ್ಸೆ ಕೊಡಲಾಗುವುದು. ಈ ಕುರಿತು ಜಿತೇಂದ್ರ ಮಜೇಥಿಯಾ ಅವರ ಜತೆಗೆ ಚರ್ಚಿಸಿದ್ದೇನೆ ಎಂದರು.

ಫೌಂಡೇಶನ್ ಅಧ್ಯಕ್ಷೆ ನಂದಿನಿ ಮಜೇಥಿಯಾ, ಕಶ್ಯಪ ಮಜೇಥಿಯಾ, ಕಾರ್ಯದರ್ಶಿ ಅಮರೇಶ ಹಿಪ್ಪರಗಿ, ಟ್ರಸ್ಟಿಗಳಾದ ಡಾ. ಕೆ. ರಮೇಶಬಾಬು, ಎಚ್.ಆರ್. ಪ್ರಹ್ಲಾದರಾವ್, ಅಮೃತಲಾಲ್ ಪಟೇಲ್, ಡಾ. ನಾಗರಾಜ ರಾವ್ ಸಾನು, ಡಾ. ಕವಿತಾ ಮೋಹರೆ, ಡಾ. ವಿ.ಬಿ. ನಿಟಾಲಿ, ಡಾ. ರಮೇಶ್ ಬಾಬು, ಬಾಲಕೃಷ್ಣ ಸಾರಾಫ್, ದಯಾಭಾಯ, ಬುರ್ಜ್ ಭುಟಾಡಾ, ಪ್ರಹ್ಲಾದ್ ರಾವ, ಡಾ. ನಾಗರಾಜರಾವ್ ಸಾನು ಹಾಗೂ ಸಿಇಒ ಡಾ. ಸುನೀಲಕುಮಾರ್ ಕುಕನೂರು ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯರಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಲಿಲ್ಲ: ಎನ್. ರವಿಕುಮಾರ್ ಆರೋಪ
ಯುವಕರು ಶಿಸ್ತುಬದ್ಧ ಜೀವನಶೈಲಿ ರೂಪಿಸಿಕೊಳ್ಳಲಿ: ವೆಂಕಟೇಶ್