ಮಂಜುನಾಥ್‌ ಕೊಲೆ: ಸ್ಥಳಕ್ಕೆ ಐಜಿಪಿ ಭೇಟಿ

KannadaprabhaNewsNetwork |  
Published : Jan 14, 2026, 02:30 AM IST
ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಬೇಟಿ  | Kannada Prabha

ಸಾರಾಂಶ

ಮಂಜುನಾಥ್‌ ಕೊಲೆ: ಸ್ಥಳಕ್ಕೆ ಐಜಿಪಿ ಭೇಟಿ

ಹುಳಿಯಾರು: ಸಮೀಪದ ಕೆಂಕೆರೆ ಗ್ರಾಮದಲ್ಲಿ ಭಾನುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಕೊಲೆಯಾದ ಶಾಮಿಯಾನದ ಮಂಜುನಾಥ್‌ ಅವರ ಮನೆಗೆ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಭೇಟಿ ನೀಡಿ ಕುಟುಂಬಸ್ಥರು ಹಾಗೂ ಸ್ಥಳೀಯ ಪೊಲೀಸರೊಂದಿಗೆ ಮಾತುಕತೆ ನಡೆಸಿದರು. ಮಂಗಳವಾರ ಇಲ್ಲಿಗೆ ಆಗಮಿಸಿದ ಅವರಿಗೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ, ಎ.ಎಸ್.ಪಿ ಗೋಪಾಲ್ ಸಿ, ಡಿ.ವೈ.ಎಸ್.ಪಿ ಯಶ್ ಕುಮಾರ್ ಶರ್ಮ, ಚಿ.ನಾ.ಹಳ್ಳಿ ವೃತ್ತ ನಿರೀಕ್ಷಕ ಜನಾರ್ದನ್, ಹುಳಿಯಾರು ಪಿ.ಎಸ್.ಐ ಜಗದೀಶ್ ಸಾಥ್‌ ನೀಡಿ ಘಟನೆ ಕುರಿತು ವಿವರಿಸಿದರು. ಇದಕ್ಕೂ ಮೊದಲು ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ