ಕನ್ನಡಪ್ರಭ ವಾರ್ತೆ ಮೈಸೂರು
ಮಾನಸ ಗಂಗೋತ್ರಿಯ ಇಎಂಎಂಆರ್ ಸಿ ಸಭಾಂಗಣದಲ್ಲಿ ಅರಿವಿನ ಚಾವಡಿ, ಮೈಸೂರು ವಿವಿ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಉಳುಮೆ ಪ್ರತಿಷ್ಠಾನ ಸಂಯುಕ್ತವಾಗಿ ಸೋಮವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವಿದ್ಯಾರ್ಥಿಗಳೊಡನೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿರಂತರ ಅಭ್ಯಾಸ, ಶ್ರಮ, ಸಮರ್ಪಣಾ ಮನೋಭಾಗ ಹಾಗೂ ಅಸಾಧ್ಯವೆಂಬ ಮನಸ್ಥಿತಿಯಿಂದ ಹೊರಬಂದರೆ ಜೀವನದಲ್ಲಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸು ಕಾಣಬಹುದು. ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ನಮಗೆ ನಾವೇ ಸುಳ್ಳು ಹೇಳಿಕೊಳ್ಳುವುದನ್ನು ಬಿಡಬೇಕು. ಇದು ನನ್ನ ಕೈಯಿಂದ ಆಗದು ಎಂಬ ಮನಸ್ಥಿತಿಯಿಂದ ಹೊರಬರಬೇಕು ಎಂದರು.ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರಯತ್ನಗಳನ್ನು ಮಾಡಬೇಕು, ಅದೇ ಯಶಸ್ಸಿನ ಗುಟ್ಟು. ಎಷ್ಟೋ ವಿದ್ಯಾರ್ಥಿಗಳು ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪದವಿ ಮುಗಿಸಿ ಐಎಎಸ್ ಪಾಸ್ ಮಾಡಿದ್ದಾರೆ. ಹೀಗಾಗಿ, ನಮ್ಮ ಕಲ್ಪನೆಗಳಲ್ಲಿ ಸಾಯಬೇಕೆ ಹೊರತು ಕನಸುಗಳನ್ನು ಹೊತ್ತುಕೊಂಡು ಸಾಯಬಾರದು ಎಂದರು.
ಸಾಮಾಜಿಕ ಕಾರ್ಯಕರ್ತ ಅಹಿಂದ ಜವರಪ್ಪ, ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ, ಸಂಶೋಧನ ವಿದ್ಯಾರ್ಥಿ ಕಲ್ಲಹಳ್ಳಿ ಕುಮಾರ್ ಮೊದಲಾದವರು ಇದ್ದರು.