- ಮೋಹನ್ ಎನ್ಕ್ಲೇವ್ ಸಭಾಂಗಣದಲ್ಲಿ ವ್ಯವಸ್ಥೆ: ತಾಲೂಕು ಅಧ್ಯಕ್ಷ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ಜುಲೈ 27ರಂದು ನಡೆಯಲಿದ್ದು, ಹೊನ್ನಾಳಿಯಲ್ಲೂ ಮನ್ ಕಿ ಬಾತ್ ನೇರ ವೀಕ್ಷಣೆಗೆ ಪಟ್ಟಣದ ಮೋಹನ್ ಎನ್ಕ್ಲೇವ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್ ಹೇಳಿದರು.ಶುಕ್ರವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳ ಕೊನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಮುಖಾಂತರ ದೇಶವಾಸಿಗಳ ಉದ್ದೇಶಿಸಿ, ನಾಡಿನ ಪ್ರಗತಿ ವಿಷಯಗಳ ಕುರಿತು ಮಾತನಾಡುತ್ತಾರೆ. ಕಾರ್ಯಕ್ರಮ ಕುರಿತು ಪ್ರಧಾನಿ ಕಚೇರಿಯಿಂದ ಪತ್ರ ಬಂದಿರುವ ಹಿನ್ನೆಲೆ ಈ ಬಾರಿ ಹೊನ್ನಾಳಿ ಜನರು ನೇರವಾಗಿ ಭಾಗವಹಿಸಿ, ಚರ್ಚಿಸಲು ಪೂರಕವಾಗಿ ಕಾರ್ಯಕ್ರಮ ವೀಕ್ಷಣೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ತಾಲೂಕು ಮಾಜಿ ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಮಾರುತಿ ನಾಯ್ಕ್, ರಂಗನಾಥ್, ಬೀರಪ್ಪ, ಸಿ.ಆರ್. ಶಿವಾನಂದ್, ಮಂಜುನಾಥ್ ಇಂಚರ, ರಾಜುಗೌಡ, ಕುಳಗಟ್ಟೆ ರಂಗನಾಥ್, ಕೆ.ವಿ.ಶ್ರೀಧರ್, ಬಾಬು ಹೋಬಳದಾರ್, ಪೇಟೆ ಪ್ರಶಾಂತ್, ತಿಪ್ಪೇಶ್ ಇತರರು ಇದ್ದರು.
- - --25ಎಚ್.ಎಲ್.ಐ1.ಜೆಪಿಜಿ: