ಯುಪಿಎಸ್‌ಸಿಯಲ್ಲೂ ನಮ್ಮವರು ಸಾಧನೆ ಮಾಡಲಿ: ನ್ಯಾ.ವಿಶ್ವಜಿತ್ ಶೆಟ್ಟಿ

KannadaprabhaNewsNetwork |  
Published : Apr 16, 2026, 02:45 AM IST
ಮಂಗಳೂರಿನಲ್ಲಿ ಬಂಟರ ಯಾನೆ ನಾಡವರ ಬಹಿರಂಗ ಅಧಿವೇಶನ ನಡೆಯಿತು | Kannada Prabha

ಸಾರಾಂಶ

ಎಸ್‌ಎಸ್ಎಲ್‌ಸಿ, ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮೊದಲ ಸ್ಥಾನಗಳನ್ನು ಪಡೆಯುತ್ತಿದೆ. ಆದರೆ ಸ್ಪರ್ಧಾತ್ಮ ಕ ಪರೀಕ್ಷೆಗಳಾದ ಯುಪಿಎಸ್ಸಿ ಪರೀಕ್ಷೆಗಳಲ್ಲಿ ನಮ್ಮವರ ಸಾಧನೆ ಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ನಮ್ಮವರು, ನಮ್ಮ ಸಂಘದವರು ಯೋಚಿಸಿ, ಯುಪಿಎಸ್‌ಸಿಯಲ್ಲೂ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡಲು ಪ್ರೇರಣೆ ನೀಡುವಂತಹ ಶಿಕ್ಷಣ, ಕಲಿಕೆಯೆಡೆಗೆ ಆದ್ಯತೆ ನೀಡಬೇಕಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಸವಣೂರು ಹೇಳಿದ್ದಾರೆ.

ಮಂಗಳೂರು: ಎಸ್‌ಎಸ್ಎಲ್‌ಸಿ, ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮೊದಲ ಸ್ಥಾನಗಳನ್ನು ಪಡೆಯುತ್ತಿದೆ. ಆದರೆ ಸ್ಪರ್ಧಾತ್ಮ ಕ ಪರೀಕ್ಷೆಗಳಾದ ಯುಪಿಎಸ್ಸಿ ಪರೀಕ್ಷೆಗಳಲ್ಲಿ ನಮ್ಮವರ ಸಾಧನೆ ಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ನಮ್ಮವರು, ನಮ್ಮ ಸಂಘದವರು ಯೋಚಿಸಿ, ಯುಪಿಎಸ್‌ಸಿಯಲ್ಲೂ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡಲು ಪ್ರೇರಣೆ ನೀಡುವಂತಹ ಶಿಕ್ಷಣ, ಕಲಿಕೆಯೆಡೆಗೆ ಆದ್ಯತೆ ನೀಡಬೇಕಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಸವಣೂರು ಹೇಳಿದ್ದಾರೆ.

ಅವರು ಭಾನುವಾರ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಮಂಗಳೂರು ಪುರಭವನದಲ್ಲಿ ನಡೆದ ಬಹಿರಂಗ ಅಧಿವೇಶನ ಉದ್ಘಾಟಿಸಿ ಮಾತನಾಡಿದರು.

ಇಲ್ಲಿನ ವಿದ್ಯಾರ್ಥಿಗಳು ವೈದ್ಯಕೀಯ, ವಾಣಿಜ್ಯ, ತಾಂತ್ರಿಕ ಕ್ಷೇತ್ರಗಳನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಯುಪಿಎಸ್‌ಸಿ ಫಲಿತಾಂಶದಲ್ಲಿ ನಮ್ಮವರು ಆಯ್ಕೆಯಾಗಿಲ್ಲ ಎಂಬುದು ಬೇಸರದ ಸಂಗತಿ, ಈ ಬಗ್ಗೆ ಗಮನಹರಿಸಬೇಕಿದೆ ಎಂದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಮೂರ್ತಿ ರಾಜೇಶ್ ರೈ ಕಲ್ಲಂಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಸಮಾಜವನ್ನು ಪ್ರೀತಿಸಿ, ಇತರ ಸಮಾಜದವರೊಂದಿಗೆ ಸಹಬಾಳ್ವೆ ನಡೆಸುವುದು ರಾಜ್ಯ, ದೇಶದ ಏಳಿಗೆಗೆ ಪೂರಕ. ಸಂವಿಧಾನದ ಆಶಯದಂತೆ ಯೋಚಿಸಿದಾಗ ನಾವು ಪಾಲಿಸಬೇಕಾದ ಅಂಶಗಳು ಕಾಣುತ್ತದೆ ಎಂದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಆಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅದ್ಯಕ್ಷತೆ ವಹಿಸಿದ್ದರು. ಕೊಡ್ಮಾನ್ ಮೋಹನದೇವ ಆಳ್ವ, ಡಾ.ಎಂ.ಕೆ. ಶೈಲಜಾ ಆಳ್ವ, ಸಂಘದ ಉಪಾಧ್ಯಕ್ಷ ಎ.ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ.ಎ.ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಸಂಜೀವ ಶೆಟ್ಟಿ ಸಂಪಿಗೇಡಿ ಮತ್ತಿತರರು ಇದ್ದರು.

ಸಂಘದ ಅಧ್ಯಕ್ಷ ಕೆ.ಅಜಿತ್ ಉಮಾರ್ ರೈ ಮಾಲಾಡಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.

ಪ್ರಶಸ್ತಿ ಪ್ರದಾನ-ಸನ್ಮಾನ

ನಿಟ್ಟೆ ಯುನಿವರ್ಸಿಟಿ ಉಪಾಧ್ಯಕ್ಷ ಹಾಗೂ ನಿಕಟಪೂರ್ವ ಉಪಕುಲಪತಿ ಡಾ.ಸತೀಶ್ ಭಂಡಾರಿ (ವೈದ್ಯಕೀಯ), ಪಶು ವೈದ್ಯಕೀಯ ಮಹಾ ವಿದ್ಯಾಲಯದ ಮಾಜಿ ಡೀನ್ ಪ್ರೊ.ವಸಂತ್ ಶೆಟ್ಟಿ ಮುಳ್ಳಾಡ್ (ಶೈಕ್ಷಣಿಕ), ಹಿರಿಯ ಸಾಹಿತಿ ಕೆ.ಉಷಾ ಪಿ.ರೈ (ಸಾಹಿತ್ಯ), ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ (ಸಂಗೀತ), ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ವಿದುಷಿ ನಯನ ವಿ.ರೈ ಕುದ್ಕಾಡಿ (ನೃತ್ಯ), ನಿವೃತ್ತ ಸೇನಾಧಿಕಾರಿ ಅಜಿತ್ ಕುಮಾರ್ ಶೆಟ್ಟಿ ಆರ್ಡಿ (ದೇಶಸೇವೆ), ರಾಷ್ಟ್ರೀಯ ಕಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ರೈ ಪುತ್ತೂರು (ಕ್ರೀಡೆ), ಅಂತರಾಷ್ಟ್ರೀಯ ಈಜುಪಟು ಚಿಂತನ್ ಎಸ್.ಶೆಟ್ಟಿ ಮಂಜೇಶ್ವರ(ಕ್ರೀಡೆ) ಮೊದಲಾದವರಿಗೆ ಡಾ.ಕೊಡ್ಮಾನ್ ನಾಗಪ್ಪ ಆಳ್ವ ಮತ್ತು ಕಲ್ಯಾಣಿ ಆಳ್ವ ಇವರ ಸ್ಮರಣಾರ್ಥ ನೀಡುವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ವಿವಿಧ ಕ್ಷೇತ್ರದ ಸಾಧಕರಾದ ವಿವೇಕ್ ಶೆಟ್ಟಿ ಬೊಳ್ಯಗುತ್ತು (ಕೈಗಾರಿಕೆ), ಪ್ರಕಾಶ್ ಭಂಡಾರಿ (ಸಾಂಸ್ಕೃತಿಕ), ಕೆ.ಕೆ.ಶೆಟ್ಟಿ ಕುತ್ತಿಕಾರ್ (ಧಾರ್ಮಿಕ), ಕರುಣಾಕರ ಶೆಟ್ಟಿ ಮಧ್ಯಗುತ್ತು (ಕೈಗಾರಿಕೆ), ದೇವಿಪ್ರಸಾದ್ ಶೆಟ್ಟಿ ಬೆಳಪು (ಸಹಕಾರಿ), ವೇಣುಗೋಪಾಲ್ ಎಲ್.ಶೆಟ್ಟಿ (ಅತಿಥ್ಯ ಉದ್ಯಮ), ಮುಗ್ರೋಡಿ ಸುಧಾಕರ ಶೆಟ್ಟಿ (ನಿರ್ಮಾಣ ಕ್ಷೇತ್ರ), ಡಾ.ನವೀನ್ ಚಂದ್ರ ಶೆಟ್ಟಿ (ಸಂಶೋಧನೆ), ಡಾ.ಅಶೋಕ್ ಆಳ್ವ (ದೈವಾರಾಧನೆ), ಕೆಂಚನೂರು ಸೋಮಶೇಖರ ಶೆಟ್ಟಿ (ಸಮಾಜಸೇವೆ), ದಿನೇಶ್ ಆಳ್ವ (ಶಿಕ್ಷಣ), ಮುರ ಸದಾಶಿವ ಶೆಟ್ಟಿ (ಕೃಷಿ) ಡಾ.ಸರಿತಾ ಹೆಗ್ಡೆ (ಕೃಷಿ), ರವೀಂದ್ರನಾಥ ಮಾರ್ಲ(ಉತ್ಪಾದನಾ ಕ್ಷೇತ್ರ) ಮೊದಲಾದವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ಮೇಳಗಳ ಸಂಚಾಲಕ ಪಿ.ಕಿಶನ್ ಹೆಗ್ಡೆ ಅವರನ್ನು ಕೊಡಿಯಾಲ್‌ಗುತ್ತು ಭಾಸ್ಕರ ರೈ ಸ್ಮರಣಾರ್ಥ ಕಲೆ-ಯಕ್ಷಗಾನ ಕ್ಷೇತ್ರದ ಸಾಧನೆಗೆ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾಯ ದೇವಳಕ್ಕೆ ನೂತನ ಬ್ರಹ್ಮರಥ ಪುರಪ್ರವೇಶ
11 ಕೋಟಿ ರು. ವೆಚ್ಚದಲ್ಲಿ ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ ಅಭಿವೃದ್ಧಿ