ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ ‘ವಿಶೇಷ ಆಹ್ವಾನಿತ ಯೂತ್ ಐಕಾನ್’ ಆಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಅವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿ.ಪಂ. ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಡಿ ಅವರ ಪುತ್ರಿ.
ಕನ್ನಡಪ್ರಭ ವಾರ್ತೆ ಉಡುಪಿ
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ ‘ವಿಶೇಷ ಆಹ್ವಾನಿತ ಯೂತ್ ಐಕಾನ್’ ಆಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಅವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿ.ಪಂ. ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಡಿ ಅವರ ಪುತ್ರಿ.ಮನು ಶೆಟ್ಟಿ ಅವರು ಉಡುಪಿ ಎಂಜಿಎಂ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿಯಾಗಿದ್ದು, ವಿದ್ಯಾರ್ಥಿ ಸಂಘಟನೆ ಎಬಿವಿಪಿ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆ ಜೆಸಿಐ ಪಡುಬಿದ್ರಿಯ ಸಕ್ರಿಯ ಸದಸ್ಯೆಯಾಗಿದ್ದಾರೆ.ವಿಕಸಿತ ಭಾರತದ ನಿರ್ಮಾಣದಲ್ಲಿ ಯುವ ಜನರ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸಲು ರಾಷ್ಟ್ರೀಯ ಮಟ್ಟದ ಯುವ ಪ್ರತಿಭೆಗಳ 2 ದಿನಗಳ ಅಧಿವೇಶನ ದೆಹಲಿಯಲ್ಲಿ ಜ.11 ಮತ್ತು 12ರಂದು ನಡೆಯಲಿದ್ದು, ಭಾರತಾದ್ಯಂತದ 3 ಸಾವಿರ ಯುವಕ, ಯುವತಿಯರು ಆಯ್ಕೆಯಾಗಿದ್ದಾರೆ. ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಕಸಿತ ಭಾರತದ ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆ ಚರ್ಚೆ, ವಿಚಾರ ಮಂಡನೆ ಮತ್ತು ಸಂವಾದಗಳು ನಡೆಯಲಿದ್ದು, ಆಹ್ವಾನಿತರು ತಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ವಿವಿಧ ಇಲಾಖೆಗಳ ಪ್ರದರ್ಶನಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಕೇಂದ್ರದ ವಿವಿಧ ಇಲಾಖಾ ಮಂತ್ರಿಗಳು, ಅಧಿಕಾರಿಗಳು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪರಿಣಿತರೊಂದಿಗೆ ಸಂವಾದ ನಡೆಯಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.