ಯುವ ಪೀಳಿಗೆಗೆ ಅನೇಕ ಉದ್ಯೋಗಾವಕಾಶ: ಉದಯಕುಮಾರ ಬಾಗುನವರ

KannadaprabhaNewsNetwork |  
Published : Jun 29, 2025, 01:32 AM IST
28ಎಚ್‌ವಿಆರ್‌1 | Kannada Prabha

ಸಾರಾಂಶ

ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾವೇರಿ ವಿಶ್ವವಿದ್ಯಾಲಯ, ಧಾರವಾಡದ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಶನಿವಾರ ಉದ್ಯೋಗ ಮೇಳ ಆಯೋಜಿಸಲಾಗಿತ್ತು.

ಹಾವೇರಿ: ಉದ್ಯೋಗ ಮೇಳಗಳ ಮೂಲಕ ಅನೇಕ ಉದ್ಯೋಗಾವಕಾಶಗಳು ಯುವ ಪೀಳಿಗೆಯನ್ನು ಹುಡುಕಿಕೊಂಡು ಬರುತ್ತಿದ್ದು, ಇದರ ಸದ್ಬಳಕೆ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಎಂದು ಧಾರವಾಡದ ಸಮರ್ಥನಂ ಅಂಗವಿಕಲರ ಸಂಸ್ಥೆ ಮುಖ್ಯಸ್ಥ ಉದಯಕುಮಾರ ಬಾಗುನವರ ಹೇಳಿದರು.

ನಗರದ ಹೊರವಲಯದಲ್ಲಿರುವ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾವೇರಿ ವಿಶ್ವವಿದ್ಯಾಲಯ, ಧಾರವಾಡದ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಮಗೆ ದೃಷ್ಟಿ ದೋಷವಿದ್ದರೂ ಸಮರ್ಥನಂ ಎಂಬ ಸಂಸ್ಥೆಯನ್ನು ಕಟ್ಟಿ, ಪ್ರತಿಯೊಬ್ಬ ನಿರುದ್ಯೋಗಿಯೂ ಉದ್ಯೋಗ ಪಡೆದು ಎಲ್ಲರು ತೆರಿಗೆ ಪಾವತಿದಾರರಾಗಬೇಕು. ಇದರಿಂದ ದೇಶವು ಆರ್ಥಿಕವಾಗಿ ಸದೃಢವಾಗಲು ಸಹಾಯವಾಗುತ್ತದೆ. ೨೦೩೦ರ ಹೊತ್ತಿಗೆ ೧೦ ಲಕ್ಷ ಉದ್ಯೋಗಗಳನ್ನು ಉದ್ಯೋಗ ಆಕಾಂಕ್ಷಿಗಳಿಗೆ ನೀಡುವ ಸದುದ್ದೇಶವನ್ನು ನಮ್ಮ ಸಂಸ್ಥೆ ಹೊಂದಿದೆ ಎಂದು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಚೈತನ್ಯಕುಮಾರ ಮೊಹತೆ ಮಾತನಾಡಿ, ಹಿಂಜರಿಕೆ ಬೇಡ, ಬದ್ಧತೆ ಇರಬೇಕು. ಉದ್ಯೋಗ ಯಾವುದೇ ಇರಲಿ, ಸಿಕ್ಕ ಉದ್ಯೋಗ ಪಡೆದುಕೊಂಡು ಉನ್ನತ ಹುದ್ದೆಗಳ ಕಡೆಗೆ ನಡೆಯಬೇಕು. ನಿಮ್ಮ ಬೆಳವಣಿಗೆಯ ಜತೆಗೆ ಸಮಾಜ, ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ವಿವಿಯ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ಮಾತನಾಡಿ, ಅಂಧರು ಇಂದು ಸಾಹಸ ಮಾಡುತ್ತಿದ್ದಾರೆ. ನೀವು ಅವರನ್ನು ನೋಡಿ ನಿಮ್ಮ ಜೀವನದ ಬದಲಾವಣೆಯನ್ನು ಕಂಡುಕೊಂಡು ಮುನ್ನಡೆಯಬೇಕಾಗಿದೆ. ಈ ಜಿಲ್ಲೆಯ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವುದೇ ನಮ್ಮ ವಿವಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಕೌಶಲ್ಯ, ನೈಪುಣ್ಯತೆ, ಸಂಹವನ, ಸಂದರ್ಶನಗಳನ್ನು ಕಲಿಯಲು ಇದು ಒಳ್ಳೆಯ ಅವಕಾಶವಾಗಿದೆ ಎಂದು ಹೇಳಿದರು.

ಅಂಗವಿಕಲ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಹಾವೇರಿ ವಿವಿಯಲ್ಲಿ ಒಂದು ವಿಶೇಷ ಘಟಕ ಸ್ಥಾಪಿಸುವುದಾಗಿ ತಿಳಿಸಿದರು. ಪ್ರತಿ ವರ್ಷ ನಮ್ಮ ವಿವಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುತ್ತೇವೆ ಎಂದು ಹೇಳಿದರು.

ಮೌಲ್ಯಮಾಪನ ಕುಲಸಚಿವೆ ಪ್ರೊ. ರೇಣುಕಾ ಮೇಟಿ, ಉಪಕುಲಸಚಿವ ಡಾ. ಮನೋಹರ ಕೋಳಿ, ಕಾರ್ಯಕ್ರಮ ಸಂಯೋಜಕಿ ಗೀತಾ ಬೆಳಗಾವಿ ಇತರರು ಇದ್ದರು. ಡಾ. ರೇಖಾ ಬಾಲೋಜಿ ಸ್ವಾಗತಿಸಿದರು. ಸಂಗೀತಾ ಬೆಳವತ್ತಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!