ಸಾರ್ವಜನಿಕರ ಆರೋಗ್ಯ ಸದೃಢಕ್ಕಾಗಿ ಹಲವು ಕಾರ್ಯಕ್ರಮ ಜಾರಿಗೆ

KannadaprabhaNewsNetwork |  
Published : Jan 01, 2026, 02:30 AM IST
ಪೋಟೋ೩೧ಸಿಎಲ್‌ಕೆ೩ ಚಳ್ಳಕೆರೆಯ ವೆಂಕಟೇಶ್ವರನಗರದ ನಮ್ಮ ಕ್ಲಿನಿಕ್ ಆವರಣದಲ್ಲಿ ಏರ್ಪಡಿಸಿದ್ದ ಆರೋಗ್ಯ ಮೇಳವನ್ನು ನಗರಸಭೆ ಮಾಜಿ ಸದಸ್ಯೆ ಕವಿತಾಬೋರಯ್ಯ ಉದ್ಘಾಟಿಸಿ, ಮಾತನಾಡಿದರು. | Kannada Prabha

ಸಾರಾಂಶ

ಚಳ್ಳಕೆರೆಯ ವೆಂಕಟೇಶ್ವರ ನಗರದ ನಮ್ಮ ಕ್ಲಿನಿಕ್ ಆವರಣದಲ್ಲಿ ಏರ್ಪಡಿಸಿದ್ದ ಆರೋಗ್ಯ ಮೇಳದಲ್ಲಿ ಗರಸಭೆ ಮಾಜಿ ಸದಸ್ಯೆ ಕವಿತಾಬೋರಯ್ಯ ಉದ್ಘಾಟಿಸಿ, ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಸರ್ಕಾರ ಸಾರ್ವಜನಿಕರ ಆರೋಗ್ಯವನ್ನು ಸದೃಢವಾಗಿಡುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇತ್ತೀಚಿನ ವರ್ಷಗಳಲ್ಲಿ ನಮ್ಮ ಕ್ಲಿನಿಕ್ ಮೂಲಕ ಎಲ್ಲಾ ಸಮುದಾಯದವರಿಗೆ ಆರೋಗ್ಯ ಪರೀಕ್ಷೆಗೆ ಒಳಪಡಿಸಿ ಸೂಕ್ತಚಿಕಿತ್ಸೆ ನೀಡುವ ಪದ್ದತಿ ಮುಂದುವರೆದಿದೆ. ನಮ್ಮ ಕ್ಲಿನಿಕ್‌ಗಳು ಸಹ ಸಾರ್ವಜನಿಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿವೆ ಎಂದು ನಗರಸಭೆ ಮಾಜಿ ಸದಸ್ಯೆ ಕವಿತಾ ಬೋರಯ್ಯ ತಿಳಿಸಿದರು.

ಪಟ್ಟಣದ ವೆಂಕಟೇಶ್ವರ ನಗರದ ನಮ್ಮ ಕ್ಲಿನಿಕ್ ಆವರಣದಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆರೋಗ್ಯ ಮೇಳವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ, ನಗರ ಪ್ರದೇಶದಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಕೆಲವೊಂದು ಸಂದರ್ಭದಲ್ಲಿ ಆಸ್ಪತ್ರೆಗೆ ದಾವಿಸಲು ಸಮಯ ಇರುವದಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಕ್ಲಿನಿಕ್‌ನ್ನು ಆರಂಭಿಸಿ ಜನರಿಗೆ ತ್ವರಿತ ಗತಿಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ ಎಂದರು.

ವೈದೇಹಿ ಆಸ್ಪತ್ರೆಯ ಮೂಳೆ ತಜ್ಞ ಡಾ.ಮಣಿಶಂಕರ್, ಕಣ್ಣು ವಿಭಾಗದ ಡಾ.ಅಮೋಘ, ಸರ್ಜನ್ ಅಭಿಷೇಕ್, ಡಾ.ಮಣಿಕಂಠನ್ ಮುಂತಾದವರು ರೋಗಿಗಳ ತಪಾಸಣಾ ಕಾರ್ಯ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಅಭಿಲಾಷ್ ಮಾತನಾಡಿ, ಇಂದು ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಈ ಭಾಗದ ಸುಮಾರು 240 ಜನ ಆಗಮಿಸಿ ಆರೋಗ್ಯ ಪರೀಕ್ಷೆಗೆ ಒಳಗಾಗಿದ್ದಾರೆ. ನಮ್ಮ ಮೊದಲ ಪ್ರಯತ್ನದಲ್ಲೇ ನಿರೀಕ್ಷೆಗೂ ಮೀರಿ ಯಶಸ್ಸು ದೊರಕಿದ್ದು, ಶಿಬಿರ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಪಿಎಂ ಪ್ರದೀಪ್, ಲೆಕ್ಕ ಅಧಿಕಾರಿ ಕೃಪಾ, ಮುಖ್ಯ ಶಿಕ್ಷಕ ಶ್ರೀನಿವಾಸ್, ದೈಹಿಕ ಶಿಕ್ಷಕ ಭೀಮಣ್ಣ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ