- ಸೈದರ ಕಲ್ಲಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕನ್ನಡಪ್ರಭ ವಾರ್ತೆ ಹೊಳೆಹೊನ್ನೂರು
ತಾಲೂಕಿನ ಸಿದ್ಲೀಪುರ, ಸನ್ಯಾಸಿ ಕೊಡಮಗ್ಗಿ, ಮುಂಗೋಟೆ, ಆನವೇರಿ, ನಿಂಬೆಗೊಂದಿ, ಸೈದರ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಅಧಿಕಾರ ಕೈಲಿದ್ದಾಗ ಕ್ಷೇತ್ರದ ಅಭಿವೃದ್ಧಿ ವಿಚಾರದ ಕುರಿತ ಧ್ವನಿ ಎತ್ತದ ಕೆಲವರು ನನ್ನ ಬಗ್ಗೆ ಟೀಕಿಸುತ್ತಿದ್ದಾರೆ. ಇದೆಲ್ಲದಕ್ಕೂ ಮುಂದಿನ ದಿನದಲ್ಲಿ ಉತ್ತರ ನೀಡಲಾಗುತ್ತದೆ. ಅದಕ್ಕೆ, ಮತದಾರರು ನನಗೆ ಬೆಂಬಲ ನೀಡಬೇಕು ಎಂದರು.
ಎಲ್ಲಾ ತಾಲೂಕಿನ ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ಕಾರ್ಯಕರ್ತರು ತಲುಪಿಸುತ್ತಿದ್ದಾರೆ. ಇದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಸರ್ಕಾರದ ಖಜಾನೆ ಗ್ಯಾರಂಟಿಗಳಿಂದ ಖಾಲಿಯಾಗಿದೆ ಎನ್ನುವ ಬಿಜೆಪಿ ಪಕ್ಷದವರು ತಮ್ಮ ಅವಧಿಯಲ್ಲಿ ಯಾವ ಬಡಬನಿಗೂ ನೀಡದೆ, 40% ಕಮಿಷನ್ ತಿಂದಿದ್ದರ ಫಲವಾಗಿ ಈ ಬಾರಿ ರಾಜ್ಯದಲ್ಲಿ ಅಧಿಕಾರದಿಂದ ದೂರ ಸರಿಸಲ್ಪಟ್ಟಿದ್ದಾರೆ ಎಂದ ಅವರು, ಆದರೆ 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಎಚ್.ಎಲ್.ಷಡಾಕ್ಷರಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ವಿಜಯ್ ಕುಮಾರ್, ಶಾಂತಕುಮಾರ್ ನಾಯ್ಕ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು, ಟಿ.ನೇತ್ರಾವತಿ, ದೇವಿ ಕುಮಾರ್, ಕೆ.ಆರ್ ಶ್ರೀಧರ್, ಎನ್.ಟಿ.ಸಂಗನಾಥ್, ಎಸ್.ಪಿ.ಜಯದೇವಪ್ಪ, ಬಂಡೇರ ಚಂದ್ರಪ್ಪ, ಎ.ಎಮ್.ಮಲ್ಲಿಕಾರ್ಜುನ್, ಆರ್. ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಅವರು, ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ನಡೆಸಲಾಗಿದೆ. ಇಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಜನರು ಮನವಿ ಮಾಡಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಭರವಸೆ ನೀಡಲಾಗಿದೆ. ಅದೇ ರೀತಿ ಮುಂದಿನ ದಿನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಂತದಲ್ಲಿ ಹರಿಹರಿಸಬಹುದಾದ ಸಮಸ್ಯೆಗಳಿಗೆ ಸ್ಪಂದಿಸು ವುದಾಗಿ ತಿಳಿಸಲಾಗುವುದು ಎಂದರು.