ಹಳಿಯಾಳ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯಾದ ನಂತರ ಮರಾಠ ಸಮಾಜಕ್ಕೆ ಸಾಕಷ್ಟು ಅನುದಾನ, ಯೋಜನೆ ಲಭಿಸಲಾರಂಭಿಸಿವೆ. ಮರಾಠ ಸಮುದಾಯದವರು ತಮ್ಮ ಸರ್ವಾಂಗೀಣ ಪ್ರಗತಿಗಾಗಿ ಈ ಯೋಜನೆಗಳ ಸದುಪಯೋಗವನ್ನು ಪಡೆಯಬೇಕೆಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿ ರಾವ್ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯಲ್ಲಿ ಮರಾಠ ಸಮುದಾಯವು ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಮರಾಠ ಸಮಾಜವು ಧೈರ್ಯ, ಶಿಸ್ತು, ರಾಷ್ಟ್ರಪ್ರೇಮಕ್ಕೆ ಹೆಸರುವಾಸಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಫಿರೋಜಷಾ ಸೋಮನಕಟ್ಟಿ, ಡಿ. ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಬಾಪಗೊಂಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ, ಮರಾಠ ಪ್ರಮುಖರಾದ ಪ್ರಕಾಶ ಪಾಕ್ರೆ, ಸಂಜು ಮಿಶಾಳೆ, ಸಂಭಾಜಿ ಹಲ್ಯಾಳಕರ, ವೆಂಕಟೇಶ್ ಸಾಳುಂಕೆ, ಬಾನು ಮಿರಾಶಿ, ಶಂಕರ ಬೆಳಗಾಂವಕರ, ರವಿ ತೋರಣಗಟ್ಟಿ ಇದ್ದರು. ನಿಗಮದ ಸಹಾಯಕ ನಿದೇರ್ಶಕ ರಂಜನ್ ನಾಯ್ಕ ಹಾಗೂ ಸಿಬ್ಬಂದಿ ದುರ್ಗಾನಂದ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.