ಕನ್ನಡಪ್ರಭ ವಾರ್ತೆ ಧಾರವಾಡ
ಇಲ್ಲಿಯ ಮರಾಠಾ ವಿದ್ಯಾಪ್ರಸಾರಕ ಮಂಡಳದಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ನಡೆದ ಮರಾಠಾ ಜಾಗೃತಿ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ದೇಶಕ್ಕೆ ಮೀಸಲಾತಿ ಕೊಟ್ಟ ಸಮಾಜ ನಮ್ಮದಾಗಿದೆ. ಆದರೆ, ಇಂದು ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅಲ್ಲದೇ ಊಳುವವರಿಗೆ ಭೂಮಿ ನೀಡಿದ ಸಮಾಜ ನಮ್ಮದು. ಆದರೆ, ನಮಗೆ ಇಂದು ಜಾಗೆ ನೀಡುವಂತೆ ಸರ್ಕಾರವನ್ನು ಕೇಳುವ ಪರಿಸ್ಥಿತಿ ಸಮಾಜಕ್ಕೆ ಬಂದೊದಗಿದೆ ಎಂದರು.ಶಿವಾಜಿ ಜಯಂತಿ ಸಂದರ್ಭದಲ್ಲಿ ಹಿಂದುತ್ವದ ಬಗೆಗೆ ಸಾಕಷ್ಟು ಜನರು ಭಾಷಣ ಮಾಡುತ್ತಾರೆ. ಆದರೆ, ಅವರ ಮನೆಯಲ್ಲಿಯೇ ಶಿವಾಜಿ ಮಹಾರಾಜರ ಭಾವಚಿತ್ರವಿರುವುದಿಲ್ಲ. ಅದಕ್ಕಾಗಿ ಇತಿಹಾಸವನ್ನು ತಿರುಚಿ ಹೇಳುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಪ್ರತಿಯೊಬ್ಬ ಮರಾಠರು ಶಿವಾಜಿ ಮಹಾರಾಜರ ಇತಿಹಾಸವನ್ನು ತಿಳಿದುಕೊಳ್ಳಬೇಕು. ಬಡವರಿಗೆ, ತೊಂದರೆಯಲ್ಲಿ ಇರುವವರಿಗೆ ಸಹಾಯ ಮಾಡುವವರೇ ಛತ್ರಪತಿ. ಆ ಕೆಲಸವನ್ನು ಶಿವಾಜಿ ಮಹಾರಾಜರು ಮಾಡಿದರು. ಅದಕ್ಕಾಗಿಯೇ ಅವರನ್ನು ಛತ್ರಪತಿ ಎಂದು ಕರೆಯಲಾಗುತ್ತದೆ. ಶಿವಾಜಿ ಮಹಾರಾಜರು ಅಷ್ಟೊಂದು ಬೆಳೆಯಲು ತಾಯಿ ಜೀಜಾಮಾತಾ ಕಾರಣ. ಆದ್ದರಿಂದ ಪ್ರತಿಯೊಂದು ಕಾರ್ಯಕ್ರಮದಲ್ಲಿ ನಾವು ಮಹಿಳೆಯರಿಗೆ ವಿಶೇಷ ಗೌರವ ನೀಡುತ್ತೇವೆ ಎನ್ನುವುದನ್ನು ಸಮಾಜದ ಬಾಂಧವರು ಅರಿತುಕೊಳ್ಳಬೇಕು ಎಂದರು.