ಟ್ರಾವೆಲ್ಲರ್ ನೂಕ್ ಅನುಷ್ಠಾನಕ್ಕೆ ಮಾರ್ಚ್ 30ರ ಗಡುವು

KannadaprabhaNewsNetwork |  
Published : Feb 03, 2026, 02:30 AM IST
ಫೋಟೋವಿವರ-(2ಎಚ್‌ಪಿಟಿ1) ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಟ್ರಾವೆಲ್ಲರ್ ನೂಕ್ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳ ಕುರಿತು ಸಭೆ ನಡೆಯಿತು | Kannada Prabha

ಸಾರಾಂಶ

ಪ್ರವಾಸಿಗರನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರಕಗಳು ಮತ್ತು ಪ್ರವಾಸಿ ತಾಣಗಳ ಬಳಿ ಪ್ರಯಾಣಿಕರ ಸುರಕ್ಷತೆಯ ತಂಗುದಾಣ ಅನುಷ್ಠಾನಗೊಳಿಸಲು ಸಿದ್ಧತೆ ಮಾಡಿಕೊಳ್ಳಬೇಕು

ಹೊಸಪೇಟೆ: ಕೇಂದ್ರ ಪುರಸ್ಕೃತ ಸ್ವದೇಶಿ ದರ್ಶನ್ 2 ರಡಿ ವಿಶ್ವ ಪಾರಂಪರಿಕ ಹಂಪಿಗೆ ಬರುವ ಪ್ರವಾಸಿಗರನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರಕಗಳು ಮತ್ತು ಪ್ರವಾಸಿ ತಾಣಗಳ ಬಳಿ ಪ್ರಯಾಣಿಕರ ಸುರಕ್ಷತೆಯ ತಂಗುದಾಣ ಅನುಷ್ಠಾನಗೊಳಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಾಕೀತು ಮಾಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಟ್ರಾವೆಲ್ಲರ್ ನೂಕ್ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಸ್ವದೇಶಿ ದರ್ಶನ್ 2.0 ಯೋಜನೆಯಡಿ ಹಂಪಿ ಆಯ್ಕೆಯಾಗಿದ್ದು, ಈ ಯೋಜನೆಯಡಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಂಪಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒಂದೇ ಸೂರಿನಡಿ ಕುಡಿಯುವ ನೀರು, ಸ್ವಚ್ಛವಾದ ಶೌಚಾಲಯ ಮತ್ತು ವಿಶ್ರಾಂತಿ ಪಡೆಯಲು ನೆರಳಿನ ವ್ಯವಸ್ಥೆ ಹೊಂದಿರುವ ಟ್ರಾವೆಲ್ಲರ್ ನೂಕ್’ಗಳನ್ನು ನಿರ್ಮಿಸಲಾಗುತ್ತಿದೆ. ಇವು ಪ್ರವಾಸಿಗರಿಗೆ ಕಡಿಮೆ ದರದಲ್ಲಿ ಅಗತ್ಯ ಮೂಲಭೂತ ಸೌಕರ್ಯಗನ್ನೊಳಗೊಂಡಿರುತ್ತದೆ. ಪ್ರವಾಸಿಗರಿಗೆ ಸುರಕ್ಷಿತವಾಗಿ ಉಳಿದುಕೊಳ್ಳಲು ಮತ್ತು ಸ್ಥಳೀಯ ಸಂಸ್ಕೃತಿಯನ್ನು ಹತ್ತಿರದಿಂದ ತಿಳಿಯಲು ಸಹಾಯ ಮಾಡುತ್ತವೆ.

ಸ್ವದೇಶಿ ದರ್ಶನ್ 2.0 ಯೋಜನೆಯಡಿ ಹಂಪಿಯ ಮಯೂರ ಭುವನೇಶ್ವರಿ ಹೋಟೆಲ್ ಹತ್ತಿರ, ಚಂದ್ರಕೇಶ್ವರ ದೇವಸ್ಥಾನ, ವಿಜಯ ವಿಠ್ಠಲ ದೇವಸ್ಥಾನ, ವಿರಪಾಕ್ಷ ದೇವಸ್ಥಾನ ಸೇರಿದಂತೆ ವಿವಿಧ ಸ್ಮಾರಕಗಳು ಮತ್ತು ಪ್ರವಾಸಿ ತಾಣಗಳ 20 ಸ್ಥಳಗಳಲ್ಲಿ ’ಟ್ರಾವೆಲ್ಲರ್ ನೂಕ್’ ಸ್ಥಾಪಿಸಬೇಕು. ಅನುಷ್ಠಾನಗೊಳಿಸಲು ಯಾವುದೇ ರೀತಿಯ ಸ್ಥಳದ ಅಭಾವ ಅಥವಾ ಇನ್ನಿತರೆ ಅಡೆತಡೆ ಉಂಟಾದಲ್ಲಿ ತ್ವರಿತವಾಗಿ ಪರಿಹಾರ ಕಂಡುಕೊಂಡು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಮಂಜುನಾಥ, ನಗರಸಭೆ ಪೌರಾಯುಕ್ತ ಶಿವಕುಮಾರ್, ಹಂಪಿಯ ಪುರಾತತ್ವ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ