ವರ್ಗಗೊಂಡ ಶಿಕ್ಷಕರಿಗೆ ಸಾರೋಟದಲ್ಲಿ ಮೆರವಣಿಗೆ

KannadaprabhaNewsNetwork |  
Published : Nov 11, 2023, 01:16 AM ISTUpdated : Nov 11, 2023, 01:17 AM IST
ವರ್ಗಾವಣೆಗೊಂಡ ಶಿಕ್ಷಕರನ್ನು ಬೆಳ್ಳಿರಥದಲ್ಲಿ ಮೆರವಣಿಗೆ ನಡೆಸಿ ಬೀಳ್ಕೊಡಲಾಯಿತು.  | Kannada Prabha

ಸಾರಾಂಶ

ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅನೇಕ ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ ಡಿ.ಕೆ. ವಿನಯ್, ರಾಘವರೆಡ್ಡಿ, ಸಾಗರ್ ಹಾಗೂ ಬಸಪ್ಪ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ತಾಲೂಕಿನ ಡಿ. ಕಗ್ಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಹಾಗೂ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಜರುಗಿತು.

ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅನೇಕ ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ ಡಿ.ಕೆ. ವಿನಯ್, ರಾಘವರೆಡ್ಡಿ, ಸಾಗರ್ ಹಾಗೂ ಬಸಪ್ಪ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ನಡೆಸಲಾಯಿತು.

ಶಾಲೆಯ ಮೈದಾನದಿಂದ ಶುರುಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ವರ್ಗಾವಣೆಗೊಂಡ ಶಿಕ್ಷಕರಿಗೆ ಶುಭಾಶಯಗಳನ್ನು ಕೋರಿದರು.

ಬಳಿಕ ಮಾತನಾಡಿದ ವರ್ಗಾವಣೆಗೊಂಡ ಶಿಕ್ಷಕರು, ಡಿ. ಕಗ್ಗಲ್ ಗ್ರಾಮಸ್ಥರು ನೀಡಿದ ಸಹಕಾರ ಹಾಗೂ ವಿದ್ಯಾರ್ಥಿಗಳ ಶಿಕ್ಷಣದ ಮೇಲಿನ ಆಸಕ್ತಿಯನ್ನು ಸ್ಮರಿಸಿದರು. ಸರ್ಕಾರಿ ಶಾಲೆಯ ಬಗ್ಗೆ ಅಪಾರ ಕಾಳಜಿ ಇರುವ ಡಿ. ಕಗ್ಗಲ್ ಗ್ರಾಮದ ಮುಖಂಡರು ಹಾಗೂ ಪೋಷಕರು ಮಕ್ಕಳ ಕಲಿಕಾ ಪ್ರಗತಿಗೆ ಸಹಕಾರ ಮಾಡುತ್ತಲೇ ಬಂದಿದ್ದಾರೆ. ಈ ಸಹಕಾರ ಹೊಸದಾಗಿ ಬರುವ ಶಿಕ್ಷಕರಿಗೂ ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಮದ ಹಿರಿಯ ಮುಖಂಡ ಎಸ್. ವೀರೇಶಪ್ಪ, ಡಿ. ಗೋಪಾಲ್, ರಾಜಶೇಖರ್, ಹುಚ್ಚಪ್ಪ, ಲಕ್ಷ್ಮಿಪತಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ್ ಪಾಟೀಲ್, ಶಾಲೆಯ ಮುಖ್ಯಗುರು ಅನಂತ್, ಸುರೇಂದ್ರ, ಶೃತಿ, ವೀರೇಶ್, ಸುದರ್ಶನ, ಮುರ್ತುಜ, ಶಂಕ್ರಮ್ಮ, ಶಿವಮ್ಮ, ಗ್ರಾಮದ ಯುವಕರಾದ ಶೇಖರ್, ಬಸವರಾಜ್, ಯು. ಓಬಳೇಶ್, ವೀರೇಂದ್ರ, ಮುನಿಸ್ವಾಮಿ, ಹೊನ್ನೂರವಲಿ, ಆಲ್ದಳ್ಳಿ ಶ್ರೀನಿವಾಸ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಡಿ. ಕಗ್ಗಲ್ ಶಾಲೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿ ನಿವೃತ್ತ ಶಿಕ್ಷಕರಾದ ಮಹ್ಮದ್ ಸಾಬ್ ಹಾಗೂ ನಜೀರ್ ಸಾಬ್ ಅವರನ್ನು ಸನ್ಮಾನಿಸಲಾಯಿತು. ವರ್ಗಾವಣೆಗೊಂಡ ಶಿಕ್ಷಕರು ಇಡೀ ಗ್ರಾಮಸ್ಥರಿಗೆ ಭೋಜನ ವ್ಯವಸ್ಥೆ ಮಾಡಿದ್ದರು. ಮನೆ ಮನೆಗೆ ಶಿಕ್ಷಕರೇ ತೆರಳಿ ಊಟಕ್ಕೆ ಆಹ್ವಾನ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!