ಮಾರಿಕಾಂಬೆ ತೇರನೆಳೆದ ನಾರಿಯರು

KannadaprabhaNewsNetwork |  
Published : Oct 26, 2023, 01:01 AM IST
5-ಸಿರುಗುಪ್ಪ-2 : ಸಿರುಗುಪ್ಪ ತಾಲೂಕಿನ ಮಿಟ್ಟೆಸೂಗೂರು ಗ್ರಾಮದ ಅಧಿದೇವತೆ ಶ್ರೀ ಮಾರಿಕಾಂಭೆಯ ರಥೋತ್ಸವ ವಿಜಯದಶಮಿಯಂದು ಅದ್ದೂರಿಯಾಗಿ ಜರುಗಿತು. | Kannada Prabha

ಸಾರಾಂಶ

ಪ್ರತಿವರ್ಷವೂ ಇಲ್ಲಿನ ರಥವನ್ನು ಮಹಿಳೆಯರೇ ಎಳೆಯುವುದು ಸಂಪ್ರದಾಯ. ಅದೇ ರೀತಿ ಈ ವರ್ಷವೂ ಮಹಿಳೆಯರು ರಥವನ್ನು ಎಳೆದು ಪುನೀತರಾದರು.

ಕನ್ನಡಪ್ರಭ ವಾರ್ತೆ ಸಿರುಗುಪ್ಪ

ತಾಲೂಕಿನ ಮಿಟ್ಟೆಸೂಗೂರು ಗ್ರಾಮದ ಅಧಿದೇವತೆ ಮಾರಿಕಾಂಬೆಯ ರಥೋತ್ಸವ ಮಂಗಳವಾರ ಸಂಭ್ರಮದಿಂದ ನೆರವೇರಿತು. ರಥವನ್ನು ಮಹಿಳೆಯರೇ ಎಳೆದದ್ದು ವಿಶೇಷವಾಗಿತ್ತು.

ಮಾರಿಕಾಂಬೆಯ ದೇವಸ್ಥಾನದಿಂದ ಪ್ರಾರಂಭವಾದ ರಥೋತ್ಸವವು ಸಿಂಹದ ಕಟ್ಟೆಯವರೆಗೆ ಸಾಗಿ ಮರಳಿ ಸ್ವಸ್ಥಾನಕ್ಕೆ ಆಗಮಿಸಿತು. ನೆರೆದಿದ್ದ ಭಕ್ತರು ಜಯಘೋಷ ಕೂಗಿ ಭಕ್ತಿ ಸಮರ್ಪಿಸಿದರು.

ರಥೋತ್ಸವಕ್ಕಿಂತ ಮುನ್ನ ವಿಜಯದಶಮಿ ಅಂಗವಾಗಿ ವಿವಿಧ ಫಲಪುಷ್ಪ, ಆಭರಣಗಳು ಹಾಗೂ ವೀಳ್ಯದೆಲೆಗಳಿಂದ ಸಿಂಗರಿಸಿ ಮಹಾಮಂಗಳಾರತಿ ಮಾಡಲಾಯಿತು. ಬಳಿಕ ಸಾಲಾಗಿ ನಿಂತ ಮಹಿಳೆಯರು ರಥವನ್ನು ಎಳೆದು ಪುನೀತರಾದರು. ಪ್ರತಿವರ್ಷವೂ ಇಲ್ಲಿನ ರಥವನ್ನು ಮಹಿಳೆಯರೇ ಎಳೆಯುವುದು ಸಂಪ್ರದಾಯ. ಅದೇ ರೀತಿ ಈ ವರ್ಷವೂ ಮಹಿಳೆಯರು ರಥವನ್ನು ಎಳೆದು ಪುನೀತರಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌