ದೇವನಹಳ್ಳಿ: ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ ಆಯೋಜಿಸಲಾಗಿದ್ದು ರಿಯಾಯಿತಿ ದರದಲ್ಲಿ ಹಣ್ಣು ಖರೀದಿಸಿ ಎಂದು ಸಂಪುಟ ದರ್ಜೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಮಾರುಕಟ್ಟೆ ಹಾಗೂ ಗ್ರಾಹಕರಿಗೆ ಗುಣಮಟ್ಟದ ಹಣ್ಣುಗಳು ಕಲ್ಪಿಸಲು ಮೇಳ ಆಯೋಜಿಸಲಾಗಿದೆ. ವಿವಿಧ ತಳಿಯ ಮಾವು, ಹಲಸು, ನೇರಳೆ ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.
ಮಾವು ಒಂದು ಮಳೆಯಾಶ್ರಿತ ಬೆಳೆ. ಮಾವು ಫಸಲು ಆರಂಭವಾಗುವ ಸಂದರ್ಭದಲ್ಲಿ ರೈತರ ತೋಟಗಳಿಗೆ ತೋಟಗಾರಿಕೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಯಾವ ರೀತಿಯ ಔಷಧಿ ಸ್ಪ್ರೇ ಮಾಡಬೇಕು, ರೋಗ ನಿಯಂತ್ರಣ ಹೇಗೆ ಎಂಬುದರ ಬಗ್ಗೆ ಸಲಹೆ ಸೂಚನೆ ನೀಡಬೇಕು. ಉತ್ತಮ ಇಳುವರಿ ಬಂದು ಒಳ್ಳೆಯ ಬೆಲೆ ಸಿಕ್ಕರೆ ರೈತರಿಗೂ ಅನುಕೂಲ. ಹಾಗಾಗಿ ಅಧಿಕಾರಿಗಳು ಮಾವು ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಹೇಳಿದರು.*ಸಸ್ಯ ಸಂತೆ*
ಮೇಳದಲ್ಲಿ ಬಗೆಬಗೆಯ ಮಾವು-ಹಲಸು
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಸಿಇಒ ಡಾ.ವಾಸಂತಿ ಅಮರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಗ್ಯಾರಂಟಿ ಯೋಜನೆ ಅನು?ನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ರೈತರು, ಗ್ರಾಹಕರು ಇದ್ದರು.