ಮಸಬಹಂಚಿನಾಳದಲ್ಲಿ ಮಾರುತೇಶ್ವರ ಕಾರ್ತಿಕ

KannadaprabhaNewsNetwork |  
Published : Dec 06, 2023, 01:15 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಕುಕನೂರುತಾಲೂಕಿನ ಮಸಬಹಂಚಿನಾಳ ಗ್ರಾಮದ ಮಾರುತೇಶ್ವರ ಕಾರ್ತಿಕ ಮಹೋತ್ಸವ ಸೋಮವಾರ ರಾತ್ರಿ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಂದ ಸಂಪನ್ನವಾಯಿತು.ಈ ಭಾಗದ ಆರಾಧ್ಯ ದೈವ ಆಂಜನೇಯ ಸ್ವಾಮಿಗೆ ಭಕ್ತರು ಮಧ್ಯಾಹ್ನದಿಂದ ತಂಡೋಪತಂಡವಾಗಿ ಹರಿದು ಬಂದರು. ಕೆಲವರು ಪಾದ ನಡಿಗೆಯಿಂದ ಬಂದರು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕುಕನೂರು

ತಾಲೂಕಿನ ಮಸಬಹಂಚಿನಾಳ ಗ್ರಾಮದ ಮಾರುತೇಶ್ವರ ಕಾರ್ತಿಕ ಮಹೋತ್ಸವ ಸೋಮವಾರ ರಾತ್ರಿ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಂದ ಸಂಪನ್ನವಾಯಿತು.

ಈ ಭಾಗದ ಆರಾಧ್ಯ ದೈವ ಆಂಜನೇಯ ಸ್ವಾಮಿಗೆ ಭಕ್ತರು ಮಧ್ಯಾಹ್ನದಿಂದ ತಂಡೋಪತಂಡವಾಗಿ ಹರಿದು ಬಂದರು. ಕೆಲವರು ಪಾದ ನಡಿಗೆಯಿಂದ ಬಂದರು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಹರಕೆ ಹೊತ್ತವರು ಮಡಿ ಉಡಿಯಿಂದ ಭಕ್ತಿ ಸಮರ್ಪಿಸಿದರು.ಸಂಜೆ ಆಗುತ್ತಿದ್ದಂತೆ ಭಕ್ತರು ದೇವಸ್ಥಾನ ಬಳಿ ಆಗಮಿಸಿ ದೀಪ ಹಚ್ಚಿದರು. ಕೆಲವು ಭಕ್ತರು ಮನೆಯಿಂದ ಅಡುಗೆ ತಂದು ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.ಕಣ್ಮನ ಸೆಳೆದ ದೀಪಾಲಂಕಾರ:

ಮಾರುತೇಶ್ವರ ದೇವಸ್ಥಾನಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ವಿಶೇಷವಾಗಿ ಮಾಡಿದ ದೀಪಗಳು ಭಕ್ತಾದಿಗಳ ಕಣ್ಮನ ಸೆಳೆದವು. ದೀಪಾಲಂಕಾರ ದೇವಸ್ಥಾನದ ಅಂದ ಹೆಚ್ಚಿಸಿದ್ದವು. ಜತೆಗೆ ಭಕ್ತರನ್ನು ತನ್ನತ್ತ ಸೆಳೆದವು.ಕಾರ್ತಿಕಕ್ಕೆ ಆಗಮಿಸಿದ ಅಪಾರ ಭಕ್ತಾದಿಗಳಿಗೆ ಮಂಗಳವಾರ ಬೆಳಗ್ಗಿನವರೆಗೂ ಅನ್ನಸಂತರ್ಪಣೆ ಜರುಗಿತು. ಗೋದಿ ಹುಗ್ಗಿ, ಕುಂಬಳಿಕಾಯಿ, ಬದನೆಕಾಯಿ ಪಲ್ಲೆ, ಅನ್ನ, ಸಾಂಬಾರ ಪ್ರಸಾದ ವಿತರಣೆ ಮಾಡಲಾಯಿತು. ಗ್ರಾಮಸ್ಥರು ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ!
ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ