ಯಡಿಯೂರಪ್ಪನವರ ಕರ್ನಾಟಕದ ಮಾಸ್ ಲೀಡರ್: ಡಾ. ವೀರಣ್ಣ ಚರಂತಿಮಠ

KannadaprabhaNewsNetwork |  
Published : Feb 28, 2025, 12:49 AM IST
ಬಿಜೆಪಿ ಸರ್ಕಾರದ ವಿವಿಧ ಯೋಜನೆ ಫಲಾನುಭವಿಗಳಿಗೆ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ತಳಮಟ್ಟದಿಂದ ಪಕ್ಷ ಕಟ್ಟಿ ಬೆಳೆಸಿದ ಸಂಘಟಕ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೆಯ ವ್ಯಾಕ್ಯದಂತೆ ನಡೆದುಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕರ್ನಾಟಕದ ಮಾಸ್ ಲೀಡರ್ ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ತಳಮಟ್ಟದಿಂದ ಪಕ್ಷ ಕಟ್ಟಿ ಬೆಳೆಸಿದ ಸಂಘಟಕ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೆಯ ವ್ಯಾಕ್ಯದಂತೆ ನಡೆದುಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕರ್ನಾಟಕದ ಮಾಸ್ ಲೀಡರ್ ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ನಗರದ ಶಿವಾನಂದ ಜೀನನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಜನ್ಮದಿನ ನಿಮಿತ್ತ ಬಾಗಲಕೋಟೆ ಬಿಜೆಪಿಯಿಂದ ಹಮ್ಮಿಕೊಂಡ ಸಮಾರಂಭದಲ್ಲಿ ಬಿಜೆಪಿ ಅವಧಿಯ ವಿವಿಧ ಯೋಜನೆಗಳ ಫಲಾನುಭವಿಗಳ ಸನ್ಮಾನಿಸಿ ಮಾತನಾಡಿದರು.

ಯಡಿಯೂರಪ್ಪನ್ನವರು ಏಕಾಂಗಿಯಾಗಿ ರಾಜ್ಯ ಸುತ್ತಾಡಿ ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಮಹಾನ್ ನಾಯಕ, ಅವರು ಬಡವರ ಭಾಗ್ಯವಿದಾತರಾಗಿ ಕೆಲಸ ಮಾಡಿದವರು. ಅವರು ಸಿಎಂ ಆದಾಗ ಜಾರಿಗೆ ತಂದ ಭಾಗ್ಯಲಕ್ಷ್ಮೀ ಯೋಜನೆ ಲಕ್ಷಾಂತರ ಹೆಣ್ಣುಮಕ್ಕಳ ಬದುಕಿಗೆ ಬೆಳಕಾಗಿದೆ. ಜೊತೆಗೆ ಕ್ಷೀರಭಾಗ್ಯ, ಸಂಧ್ಯಾಸುರಕ್ಷಾ ಹಾಗೂ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿಸಾಲ ಯೋಜನೆ ಜಾರಿಗೆ ತಂದರು. ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವ ಮೂಲಕ ರೈತ ಮಗನಾಗಿ ನಾಡಿಗೆ ಕೊಡುಗೆ ನೀಡಿದರು ಎಂದು ಹೇಳಿದರು.

ಫಲಾನುಭವಿಗಳ ಸನ್ಮಾನ:

ಕಿಸಾನ್ ಸಮ್ಮಾನ ಯೋಜನೆಯಲ್ಲಿ ಮಲ್ಲಪ್ಪ ಡಾವಣಗೇರಿ, ಭಾಗ್ಯ ಲಕ್ಷ್ಮೀ ಬಾಂಡ್ ಯೋಜನೆಯಲ್ಲಿ ಕಾವ್ಯ ಎಳಮ್ಮಿ, ಭವಾನಿ ಬಾಗಣಿ, ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಸೈಕಲ್‌ ವಿತರಣೆ ಯೋಜನೆಯಲ್ಲಿ ಭಾಗ್ಯ ಗಟ್ಟಿಗನೂರ, ವಿಜಯಕುಮಾರ ಅಂಬಿಗೇರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಗುಂಡುರಾವ ಶಿಂಧೆ, ರಾಜು ಶಿಂತ್ರೆ, ಶಶಿಕುಮಾರ ಗುತ್ತೆನ್ನವರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಸತ್ಯನಾರಾಯಣ ಹೇಮಾದ್ರಿ, ಚಂದ್ರು ರಾಮವಾಡಗಿ, ಯಲ್ಲಪ್ಪ ಎಳಮ್ಮಿ, ಶಂಕರ ಕದಂ, ಹೊನ್ನಪ್ಪ ಅಂಬಿಗೇರ, ಕೃಷ್ಣಾ ಖಾಕಂಡಕಿ, ಬಸವರಾಜ ನೀಲನಾಯಕ, ಬಸವರಾಜ ಬಡಿಗೇರ, ರಮೇಶ ಉಪ್ಪಾರ ಹಾಗೂ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ