ದುಂದುವೆಚ್ಚದ ವಿವಾಹಕ್ಕಿಂತ ಸಾಮೂಹಿಕ ವಿವಾಹ ಉತ್ತಮ: ಶಾಸಕ ಪುಟ್ಟಸ್ವಾಮಿಗೌಡ

KannadaprabhaNewsNetwork |  
Published : Dec 18, 2025, 12:30 AM IST
ಗೌರಿಬಿದನೂರು ಕಲ್ಲೂಡಿಯಲ್ಲಿ ಸಾಮೂಹಿಕ ವಿವಾಹ | Kannada Prabha

ಸಾರಾಂಶ

ದಂಪತಿಗಳ ಜೀವನದಲ್ಲಿ ಸಣ್ಣಪುಟ್ಟ ಗಲಾಟೆ, ಜಗಳ, ವೈಮನಸ್ಸು ಬರುವುದು ಸರ್ವೇ ಸಾಮಾನ್ಯ. ಎಲ್ಲವನ್ನೂ ಇಬ್ಬರೂ ಪ್ರೀತಿಯಿಂದ ಸ್ವೀಕರಿಸುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು.

ಗೌರಿಬಿದನೂರು: ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ, ಆರ್ಥಿಕ ಹೊರೆ ತಗ್ಗಿ, ಜೀವನದಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ತಿಳಿಸಿದರು.

ತಾಲೂಕಿನ ಕಲ್ಲೂಡಿ ಗ್ರಾಮದ ಶ್ರೀ ಕಲ್ಲಿನಾಥೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅರುಧಂತಿ ವಸಿಷ್ಠರ ಕಲ್ಯಾಣೋತ್ಸವದ ಅಂಗವಾಗಿ ಕರ್ನಾಟಕ ಮಾದಿಗ ದಂಡೋರ ಹಾಗೂ ಭಾರತೀಯ ಸೇವಾ ಸಮಿತಿ ಗೌರಿಬಿದನೂರು ಶಾಖೆ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ, ವಿಚಾರವಾದಿಗಳು ಮತ್ತು ಬುದ್ಧಿವಂತರು ಇಂತಹ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳುತ್ತಾರೆ ಎಂದರು.

ಮಾಂಗಲ್ಯವನ್ನು ವಿತರಿಸಿ ನೂತನ ದಂಪತಿಗಳಿಗೆ ಶುಭ ಹಾರೈಸಿ, ವಿವಾಹವೆಂಬುದು ಜನ್ಮ ಜನ್ಮಾಂತರದ ಪವಿತ್ರ ಬಂಧನವಾಗಿದೆ. ಸಂಸಾರದಲ್ಲಿ ಹಲವು ಕಷ್ಟ- ಸುಖಗಳು, ನೋವು- ನಲಿವುಗಳು ಸಾಮಾನ್ಯ. ನೀವೆಲ್ಲರೂ ಅವುಗಳೆಲ್ಲವನ್ನು ಸಮಾನವಾಗಿ ಸ್ವೀಕರಿಸಿ, ನಂಬಿಕೆಯಿಂದ ಸಂತೋಷವಾಗಿ ಜೀವನ ಸಾಗಿಸಿ ಸಮಾಜಕ್ಕೆ ಮಾದರಿಯಾಗಿರಬೇಕೆಂದು ತಿಳಿಸಿದರು.

ಆದಿಜಾಂಬವ ಮಹಾಸಂಸ್ಥಾನ ಮಠ ಕೋಡಿಹಳ್ಳಿ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ದಂಪತಿಗಳ ಜೀವನದಲ್ಲಿ ಸಣ್ಣಪುಟ್ಟ ಗಲಾಟೆ, ಜಗಳ, ವೈಮನಸ್ಸು ಬರುವುದು ಸರ್ವೇ ಸಾಮಾನ್ಯ. ಎಲ್ಲವನ್ನೂ ಇಬ್ಬರೂ ಪ್ರೀತಿಯಿಂದ ಸ್ವೀಕರಿಸುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಮಾದಿಗ ದಂಡೋರ ರಾಜ್ಯ ಘಟಕದ ಅಧ್ಯಕ್ಷ ಎಂ. ಶಂಕರಪ್ಪ ಮಾತನಾಡಿ, ಇಂದಿನ ದಿನಗಳಲ್ಲಿ ವಿವಾಹ ವಿಚ್ಛೇಧನಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ, ಪತಿ- ಪತ್ನಿ ಪರಸ್ಪರ ಅರ್ಥೈಸಿಕೊಂಡಾಗ ಜೀವನವು ನೆಮ್ಮದಿಯಿಂದ ಸಾಗಲು ಸಾಧ್ಯ, ನವ ದಂಪತಿಗಳು ಯಾವುದೇ ಕಾರಣಕ್ಕೂ ಜಗಳವಾಡಬಾರದು ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ಸೇನಾ ಸಮಿತಿ ರಾಷ್ಟ್ರ ಅಧ್ಯಕ್ಷ ಹೂಡಿ ರಾಮಚಂದ್ರ, ಅಮರ್, ಕಾಂತರಾಜು, ಪ್ರಕಾಶ್, ಕೃಷ್ಣಪ್ಪ, ವಿಜಯ ರಾಘವ, ಎ. ಗಂಗಾಧರಪ್ಪ, ರಾಮಾಂಜಿನಮ್ಮ, ಅರುಂಧತಿ, ನಾಗರಾಜ ನಾಯಕ್, ಬಾಬಣ್ಣ, ಮುನಿಯಪ್ಪ, ಮಲ್ಲಸಂದ್ರ ಗಂಗಾಧರಪ್ಪ, ಎಚ್.ಎಲ್. ವೆಂಕಟೇಶ್, ಜಿ. ನರಸಿಂಹಮೂರ್ತಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು