ಕುಷ್ಟಗಿ:
ತಾಲೂಕಿನ ಕೊರಡಕೇರಾ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಅಮೋಘ ಸಿದ್ದೇಶ್ವರ ನೂತನ ಗೋಪುರ, ದ್ವಾರಬಾಗಿಲು ಲೋಕಾರ್ಪಣೆ ಹಾಗೂ ಸರ್ವಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಆರ್ಥಿಕ ಹೊರೆ ತಪ್ಪಿಸಬಹುದಾಗಿದೆ. ಪ್ರಜ್ಞಾಪೂರ್ವಕವಾಗಿ ಸರಳತೆಗೆ ಸಾಮೂಹಿಕ ವಿವಾಹ ಮಾದರಿಯಾಗಿದೆ. ಸಮಾಜದಲ್ಲಿನ ಎಲ್ಲ ಸಮುದಾಯಗಳು ಒಗ್ಗೂಡಿ ನಡೆಸುವ ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯದ ಬಾಂಧವ್ಯ ಬೆಳೆಯಲಿದೆ ಎಂದರು.
ಇಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳೇನ್ನದೆ ಒಂದೇ ಎನ್ನುವ ಭಾವನೆಯೊಂದಿಗೆ ಸತ್ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗುವರರು ಪುಣ್ಯವಂತರು. ಇಲ್ಲಿ ಅನೇಕ ಶ್ರೀಗಳ ಆಶೀರ್ವಾದವೂ ಸಿಗುತ್ತದೆ. ಇಂತಹ ಅವಕಾಶಗಳು ಇಲ್ಲಿ ಮಾತ್ರ ಸಿಗಲಿದ್ದು ಉತ್ತಮ ಜೀವನ ನಡೆಸುವಂತೆ ನೂತನ ವಧು-ವರರಿಗೆ ಹಾರೈಸಿದರು.
ತಿಂಥಣಿಯ ಕನಕಗುರುಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಕರಿಬಸವಶಿವಾಚಾರ್ಯರು, ಚನ್ನಬಸವ ಶಿವಾಚಾರ್ಯರು, ಸಿದ್ದಯ್ಯಸ್ವಾಮಿ ಗುರುವಿನ್, ಸಿದ್ದರಾಮಯ್ಯ ತಾತ, ಸಿದ್ದಯ್ಯತಾತ ಗುರುವಿನ, ತೇಜಯ್ಯ ಗುರುವಿನ, ಸಿದ್ದಯ್ಯ ಗುರುವಿನ, ಕಳಕಯ್ಯ ಗುರುವಿನ, ಶಿವಾನಂದಯ್ಯ ಗುರುವಿನ ಸೇರಿದಂತೆ ಹಾಲುಮತ ಸಮಾಜದ ಗುರುಗಳು ಪಾಲ್ಗೊಂಡಿದ್ದರು.
ಬೆಳಗ್ಗೆ ಶ್ರೀಅಮೋಘಸಿದ್ದೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದ ಗೋಪುರ ಹಾಗೂ ನೂತನ ದ್ವಾರ ಬಾಗಿಲು ಲೋಕಾರ್ಪಣೆಗೊಂಡಿತು. ಸಾಮೂಹಿಕ ವಿವಾಹಗಳಲ್ಲಿ ಒಟ್ಟು 11 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟರು.