ಕುಷ್ಟಗಿ: ತಾಲೂಕಿನ ಹಿರೇಮನ್ನಾಪುರದಲ್ಲಿ ಕಾಶಿವಿಶ್ವನಾಥ ದೇವರ ಕಳಶಾರೋಹಣ, ಜಾತ್ರಾಮಹೋತ್ಸವ ಹಾಗೂ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಗುರುವಾರ ಜರುಗಿತು.
ಸಾಮೂಹಿಕ ವಿವಾಹ: ಕಾಶಿ ವಿಶ್ವನಾಥ ದೇವರ ಕಳಶಾರೋಹಣ, ಜಾತ್ರಾ ಮಹೋತ್ಸವ ಹಾಗೂ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ಕಾರ್ಯಕ್ರಮದ ಅಂಗವಾಗಿ 10 ಜೋಡಿಗಳ ಸಾಮೂಹಿಕ ವಿವಾಹಗಳು ನಡೆದವು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕುಷ್ಟಗಿಯ ಮದ್ದಾನೇಶ್ವರ ಮಠದ ಕರಿಬಸವ ಶ್ರೀಗಳು ಮಾತನಾಡಿ, ಸಾಮೂಹಿಕ ವಿವಾಹ ಸಾಮಾಜಿಕ ಏಕತೆ ಬೆಳೆಯುತ್ತಿದ್ದು ಅನವಶ್ಯಕ ಖರ್ಚು ಕಡಿಮೆ ಮಾಡುವ ಉತ್ತಮ ಸಂಪ್ರದಾಯವಾಗಿದ್ದು, ಸಮಾಜದಲ್ಲಿ ಸೌಹಾರ್ದತೆ ಹೆಚ್ಚಿಸುತ್ತದೆ ಎಂದ ಸಾಮೂಹಿಕ ವಿವಾಹಗಳು ಬಡವರ ಮದುವೆಗಳಲ್ಲ ಭಾಗ್ಯವಂತರ ಮದುವೆಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.ಗುಡದೂರ ನಿಲಕಂಠಯ್ಯ ತಾತನವರು ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ.ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ,ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ ವಧು–ವರರು ದಾಂಪತ್ಯ ಜೀವನ ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.