ಕನ್ನಡಪ್ರಭ ವಾರ್ತೆ ಹನೂರು
ರಂಗಮಂದಿರದಲ್ಲಿ ಅಂತಿಮ ಸಿದ್ಧತೆ:
ಪ್ರಾಧಿಕಾರದ ರಂಗಮಂದಿರದಲ್ಲಿ ಆಗಸ್ಟ್ 18ರಂದು ಬೆಳಗ್ಗೆ 9:20 ರಿಂದ 10: 10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ. ಈ ನಿಟ್ಟಿನಲ್ಲಿ ಅತಿಥಿ ಗಣ್ಯರ ವೇದಿಕೆ, ಸಾಮೂಹಿಕ ವಿವಾಹದ ಸ್ಥಳ, ಸಂಬಂಧಿಕರು ಹಾಗೂ ಹಿತೈಷಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.ವಧುವಿಗೆ ನಾಲ್ಕು ಗ್ರಾಮದ ಚಿನ್ನದ ತಾಳಿ, ಬೆಳ್ಳಿ ಕಾಲುಂಗುರ, ಸೀರೆ, ರವಿಕೆ, ವರನಿಗೆ ಪಂಚೆ, ಶರ್ಟ್, ಪೇಟವನ್ನು ನೀಡಲಾಗುತ್ತಿದೆ. ಹಲವು ವರ್ಷಗಳಿಂದ ವಧುವಿಗೆ ಮೂರು ಗ್ರಾಂ ಚಿನ್ನದ ತಾಳಿ ನೀಡಲಾಗುತ್ತಿತ್ತು. ಕಳೆದ ಎರಡು ವರ್ಷಗಳಿಂದ ಒಂದು ಗ್ರಾಂ ಸೇರ್ಪಡೆ ಮಾಡಿ ನಾಲ್ಕು ಗ್ರಾಂ ಚಿನ್ನದ ತಾಳಿ ವಿತರಣೆ ಮಾಡಲಾಗುತ್ತಿದೆ.ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಮಹತ್ವ :
ವಿಶೇಷ ಹೂವಿನ ಅಲಂಕಾರ:
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿವರ್ಷ ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಬಂಧ ಶ್ರೀ ಮಹದೇಶ್ವರ ಸ್ವಾಮಿಯ ಹೊರ, ಒಳ ಆವರಣ ರಾಜು ಗೋಪುರ, ಅತಿಥಿ ಗಣ್ಯರ ಮುಖ್ಯದ್ವಾರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿವಿಧ ಬಗೆಯ ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತಿದೆ. ಅದೇ ರೀತಿ ಈ ಬಾರಿ ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಹೂವಿನ ಅಲಂಕಾರ ಮೆರುಗು ನೀಡಿದೆ.ವಧು ವರನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ:
ನೋಂದಾಯಿಸಿಕೊಂಡಿರುವ ವಧು ವರರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಇದಲ್ಲದೆ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬರುವ ಸಂಬಂಧಿಕರಿಗೆ ಡಾರ್ಮೆಟ್ರಿಗಳನ್ನು ನಿಗದಿಪಡಿಸಿ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ.ಗಣ್ಯರು ಹಾಗೂ ಮಠಾಧೀಶರು ಭಾಗಿ:ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಉಚಿತ ಸಾಮೂಹಿಕ ಕಾರ್ಯಕ್ರಮಕ್ಕೆ ರಾಜ್ಯದ ಗಣ್ಯರು ಮತ್ತು ಮಠಾಧೀಶರು ಸೇರಿದಂತೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಶಾಸಕರಾದ ಎಂ.ಆರ್.ಮಂಜುನಾಥ್ ಸೇರಿದಂತೆ ವಿವಿಧ ಭಾಗಗಳಿಂದ ಮುಖಂಡರು ಮಾದಪ್ಪನ ಭಕ್ತರು ಆಗಮಿಸಲಿದ್ದಾರೆ .
--------17ಸಿಎಚ್ಎನ್17
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ. 18ರಂದು ಸಾಮೂಹಿಕ ವಿವಾಹ ಕಾರ್ಯಕ್ರಮದ ಅಂತಿಮ ಸಿದ್ಧತೆಯನ್ನು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ ನಡೆಸಿದರು.