ಕನ್ನಡಪ್ರಭ ವಾರ್ತೆ ಉಡುಪಿ
ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವಜನರಿಗೆ ಉದ್ಯೋಗವನ್ನು ಒದಗಿಸುವ ಬೃಹತ್ ಉದ್ಯೋಗ ಮೇಳವು ಫೆಬ್ರವರಿ ಮೊದಲನೇ ವಾರದಲ್ಲಿ ಉಡುಪಿ ನಗರದ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳ 100 ಕ್ಕೂ ಹೆಚ್ಚು ಉದ್ಯೋಗದಾತರುಗಳು ಭಾಗವಹಿಸಲಿದ್ದು, 3500 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಮೇಳಕ್ಕೆ ಆಗಮಿಸುವ ನಿರೀಕ್ಷೆಯಲಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ, ಯಶಸ್ವಿಗೊಳಿಸಬೇಕು ಎಂದರು.ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ -ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಸಹ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು ಎಂದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಾಧ್ಯಮಗಳು ಹೆಚ್ಚಿನ ಪ್ರಚಾರ ಪಡಿಸಿ, ಹೆಚ್ಚು ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಕೌಶಲ್ಯ ರೋಜಗಾರ್ ಮೇಳವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಮೇಳವು ಶಿಸ್ತು ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳುವುದರ ಜೊತೆಗೆ ಹೆಚ್ಚು ಜನರಿಗೆ ಉದ್ಯೋಗ ದೊರೆಯುವಂತಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.