ಕೊಡಗಿನ ಪಾಲಂಗಾಲ ಅರಣ್ಯ ಪ್ರದೇಶದಲ್ಲಿ ಭಾರಿ ಭೂಕುಸಿತ!

KannadaprabhaNewsNetwork |  
Published : Aug 02, 2025, 12:15 AM IST
1ಎಂಡಿಕೆ4 : ಪಾಲಂಗಾಲದ ಅರಣ್ಯ ಪ್ರದೇಶದಲ್ಲಿ ಭೂಕುಸಿತ ಉಂಟಾಗಿರುವುದು.  | Kannada Prabha

ಸಾರಾಂಶ

ಅರಣ್ಯದ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮನೆಗಳು ಇಲ್ಲದ್ದರಿಂದ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಗುಡ್ಡ ಕುಸಿತದಿಂದ ಹಲವು ಮರಗಳು ಧರೆಗೆ ಉರಳಿವೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಸಮೀಪದ ಪಾಲಂಗಾಲದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಭೂಕುಸಿತ ಉಂಟಾಗಿದೆ. ಇದು ಜಿಲ್ಲೆಯಲ್ಲಿ ಮತ್ತೆ ಆತಂಕವನ್ನುಂಟು ಮಾಡಿದೆ.

ಅರಣ್ಯದ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮನೆಗಳು ಇಲ್ಲದ್ದರಿಂದ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಗುಡ್ಡ ಕುಸಿತದಿಂದ ಹಲವು ಮರಗಳು ಧರೆಗೆ ಉರಳಿವೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.55 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 25.05 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 2.65 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 2.78 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 7.45 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ 9.80 ಮಿ.ಮೀ. ಮಳೆಯಾಗಿದೆ.ಹೋಬಳಿವಾರು ವಿವರ: ಮಡಿಕೇರಿ ಕಸಬಾ 23, ನಾಪೋಕ್ಲು 6.40, ಸಂಪಾಜೆ 48, ಭಾಗಮಂಡಲ 22.80, ವಿರಾಜಪೇಟೆ 2.80, ಅಮ್ಮತ್ತಿ 2.50, ಹುದಿಕೇರಿ 5.90, ಶ್ರೀಮಂಗಲ 1.20, ಪೊನ್ನಂಪೇಟೆ 2, ಬಾಳೆಲೆ 2.01, ಸೋಮವಾರಪೇಟೆ 6.80, ಶನಿವಾರಸಂತೆ 3, ಶಾಂತಳ್ಳಿ 16, ಕೊಡ್ಲಿಪೇಟೆ 4, ಕುಶಾಲನಗರ 2.60, ಸುಂಟಿಕೊಪ್ಪ 17 ಮಿ.ಮೀ.ಮಳೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ